8:26 PM Monday17 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಥಾಣೆ: 40ನೇ ಮಹಡಿಯಿಂದ ಲಿಫ್ಟ್ ಕುಸಿದು 7 ಮಂದಿ ಕಾರ್ಮಿಕರ ದಾರುಣ ಸಾವು

11/09/2023, 12:43

ಮುಂಬೈ(reporterkarnataka.com): ಮಹಾರಾಷ್ಟ್ರ ಥಾಣೆಯಲ್ಲಿ ಲಿಫ್ಟ್ ವೊಂದು ಏಕಾಏಕಿ 40ನೇ ಮಹಡಿಯಿಂದ ಒಮ್ಮೆಲೆ ನೆಲ ಮಾಳಿಗೆಗೆ ಕುಸಿದು 7 ಮಂದಿ ಸಾವನ್ನಪ್ಪಿದ್ದಾರೆ.
ಅವಘಡದಲ್ಲಿ ಮೃತಪಟ್ಟವರನ್ನು ಮಹೇಂದ್ರ ಚೌಪಾಲ್ (32), ರೂಪೇಶ್ ಕುಮಾರ್ ದಾಸ್ (21), ಹರೂನ್ ಶೇಖ್ (47), ಮಿಥ್ಲೇಶ್ (35), ಕರಿದಾಸ್ (38) ಮತ್ತು ಸುನೀಲ್ ಕುಮಾರ್ ದಾಸ್ (21) ಎಂದು ಗುರುತಿಸಲಾಗಿದೆ. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಮೃತಪಟ್ಟವರೆಲ್ಲ ಕಟ್ಟಡ ಕಾರ್ಮಿಕರಾಗಿದ್ದು ಲಿಫ್ಟ್‌ನಲ್ಲಿ ಇಳಿಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಲಿಫ್ಟ್‌ನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ಲಿಫ್ಟ್‌ನ ಕೇಬಲ್ ತುಂಡಾಗಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು