1:34 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಥಾಣೆ: 40ನೇ ಮಹಡಿಯಿಂದ ಲಿಫ್ಟ್ ಕುಸಿದು 7 ಮಂದಿ ಕಾರ್ಮಿಕರ ದಾರುಣ ಸಾವು

11/09/2023, 12:43

ಮುಂಬೈ(reporterkarnataka.com): ಮಹಾರಾಷ್ಟ್ರ ಥಾಣೆಯಲ್ಲಿ ಲಿಫ್ಟ್ ವೊಂದು ಏಕಾಏಕಿ 40ನೇ ಮಹಡಿಯಿಂದ ಒಮ್ಮೆಲೆ ನೆಲ ಮಾಳಿಗೆಗೆ ಕುಸಿದು 7 ಮಂದಿ ಸಾವನ್ನಪ್ಪಿದ್ದಾರೆ.
ಅವಘಡದಲ್ಲಿ ಮೃತಪಟ್ಟವರನ್ನು ಮಹೇಂದ್ರ ಚೌಪಾಲ್ (32), ರೂಪೇಶ್ ಕುಮಾರ್ ದಾಸ್ (21), ಹರೂನ್ ಶೇಖ್ (47), ಮಿಥ್ಲೇಶ್ (35), ಕರಿದಾಸ್ (38) ಮತ್ತು ಸುನೀಲ್ ಕುಮಾರ್ ದಾಸ್ (21) ಎಂದು ಗುರುತಿಸಲಾಗಿದೆ. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಮೃತಪಟ್ಟವರೆಲ್ಲ ಕಟ್ಟಡ ಕಾರ್ಮಿಕರಾಗಿದ್ದು ಲಿಫ್ಟ್‌ನಲ್ಲಿ ಇಳಿಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಲಿಫ್ಟ್‌ನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ಲಿಫ್ಟ್‌ನ ಕೇಬಲ್ ತುಂಡಾಗಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು