7:35 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ತಹಶೀಲ್ದಾರ್ ವಿರುದ್ಧ ಕ್ರಿಮಿನಲ್ ಕೇಸ್ : ಅಕ್ರಮ ಖಾತೆ ಮಾಡಿದ ಆರೋಪ; ಪೊಲೀಸರಿಗೆ ಉಪ ವಿಭಾಗಾಧಿಕಾರಿ ದೂರು

13/08/2023, 10:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸದ್ಯ ಕಡೂರಿನಿಂದ ವರ್ಗಾವಣೆಗೊಂಡಿರುವ ತಹಸೀಲ್ದಾರ್ ಉಮೇಶ್
ಅವರು ಕಾನೂನು ಬಾಹಿರವಾಗಿ ಖಾತೆ ಮಾಡಿಕೊಟ್ಟಿರುವ ಆರೋಪದ ಮೇಲೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.
ಉಪ ವಿಭಾಗಾಧಿಕಾರಿ ಡಾ.ಕಾಂತರಾಜ್ ಅವರು ತಹಶೀಲ್ದಾರರ್ ಉಮೇಶ್ ವಿರುದ್ದ ಕಡೂರು ಪೊಲೀಸರಿಗೆ
ದೂರು ನೀಡಿದ್ದಾರೆ.
ಸರ್ಕಾರಿ ಬೀಳು ಜಮೀನನ್ನು ಅಕ್ರಮವಾಗಿ ಜನರಿಗೆ ಖಾತೆ ಮಾಡಿಕೊಟ್ಟಿದ್ದ ಆರೋಪ
ತಹಶೀಲ್ದಾರ್ ಉಮೇಶ್ ಮೇಲಿದೆ. ಕಡೂರು ತಾಲೂಕಿನ ಉಳಿಗನಾರು ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಖಾತೆ ಮಾಡಿ ಕೊಡಲಾಗಿದೆ. ಗ್ರಾಮದ ಹನುಮಯ್ಯ, ರತ್ನಮ್ಮ, ನಾರಾಯಣಪ್ಪ, ಗೌರಮ್ಮಗೆ ಖಾತೆ ಮಾಡಿಕೊಟ್ಟಿರುವ ಆರೋಪ ತಹಶೀಲ್ದಾರ್ ಅವರ ಮೇಲಿದೆ. ಸರ್ಕಾರಿ ಬೀಳು ಜಮೀನನ್ನು ನಾಲ್ವರಿಗೆ ಖಾತೆ ಮಾಡಿಕೊಟ್ಟಿದ್ದಾರೆ. ಒಟ್ಟು
5.04 ಎಕರೆ ಸರ್ಕಾರಿ ಜಮೀನನ್ನ ಉಮೇಶ್ ಅವರು
ನಾಲ್ವರಿಗೆ ಖಾತೆ ಮಾಡಿಕೊಟ್ಟಿದ್ದಾರೆ.
ಕಾನೂನಿನ ನಿಯಮಗಳನ್ನು ಗಾಳಿ ತೂರಿ ತಹಶೀಲ್ದಾರ್ ಉಮೇಶ್ ಅವರು ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂಬ ಆರೋಪವಿದೆ. ತಹಶೀಲ್ದಾರ್ ಉಮೇಶ್ ಸೇರಿ ಮೂವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ತಹಶೀಲ್ದಾರ್ ಉಮೇಶ್, ಶಿರಸ್ತೆದಾರ್ ನಂಜುಂಡಯ್ಯ, ಆರ್. ಐ. ಬಸವರಾಜಪ್ಪ ವಿರುದ್ದ ಪ್ರಕರಣ ದಾಖಲಾಗಿದೆ.
ಕಡೂರು ಪೊಲೀಸ್ ಠಾಣೆಗೆ ಎಸಿ ಕಾಂತರಾಜ್ ದೂರು ನೀಡಿದ್ದಾರೆ. ಸದ್ಯ ತಹಶೀಲ್ದಾರ್ ಉಮೇಶ್
ಕಡೂರಿನಿಂದ ವರ್ಗಾವಣೆಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು