11:12 PM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ತಹಶೀಲ್ದಾರ್ ವಿರುದ್ಧ ಕ್ರಿಮಿನಲ್ ಕೇಸ್ : ಅಕ್ರಮ ಖಾತೆ ಮಾಡಿದ ಆರೋಪ; ಪೊಲೀಸರಿಗೆ ಉಪ ವಿಭಾಗಾಧಿಕಾರಿ ದೂರು

13/08/2023, 10:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸದ್ಯ ಕಡೂರಿನಿಂದ ವರ್ಗಾವಣೆಗೊಂಡಿರುವ ತಹಸೀಲ್ದಾರ್ ಉಮೇಶ್
ಅವರು ಕಾನೂನು ಬಾಹಿರವಾಗಿ ಖಾತೆ ಮಾಡಿಕೊಟ್ಟಿರುವ ಆರೋಪದ ಮೇಲೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.
ಉಪ ವಿಭಾಗಾಧಿಕಾರಿ ಡಾ.ಕಾಂತರಾಜ್ ಅವರು ತಹಶೀಲ್ದಾರರ್ ಉಮೇಶ್ ವಿರುದ್ದ ಕಡೂರು ಪೊಲೀಸರಿಗೆ
ದೂರು ನೀಡಿದ್ದಾರೆ.
ಸರ್ಕಾರಿ ಬೀಳು ಜಮೀನನ್ನು ಅಕ್ರಮವಾಗಿ ಜನರಿಗೆ ಖಾತೆ ಮಾಡಿಕೊಟ್ಟಿದ್ದ ಆರೋಪ
ತಹಶೀಲ್ದಾರ್ ಉಮೇಶ್ ಮೇಲಿದೆ. ಕಡೂರು ತಾಲೂಕಿನ ಉಳಿಗನಾರು ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಖಾತೆ ಮಾಡಿ ಕೊಡಲಾಗಿದೆ. ಗ್ರಾಮದ ಹನುಮಯ್ಯ, ರತ್ನಮ್ಮ, ನಾರಾಯಣಪ್ಪ, ಗೌರಮ್ಮಗೆ ಖಾತೆ ಮಾಡಿಕೊಟ್ಟಿರುವ ಆರೋಪ ತಹಶೀಲ್ದಾರ್ ಅವರ ಮೇಲಿದೆ. ಸರ್ಕಾರಿ ಬೀಳು ಜಮೀನನ್ನು ನಾಲ್ವರಿಗೆ ಖಾತೆ ಮಾಡಿಕೊಟ್ಟಿದ್ದಾರೆ. ಒಟ್ಟು
5.04 ಎಕರೆ ಸರ್ಕಾರಿ ಜಮೀನನ್ನ ಉಮೇಶ್ ಅವರು
ನಾಲ್ವರಿಗೆ ಖಾತೆ ಮಾಡಿಕೊಟ್ಟಿದ್ದಾರೆ.
ಕಾನೂನಿನ ನಿಯಮಗಳನ್ನು ಗಾಳಿ ತೂರಿ ತಹಶೀಲ್ದಾರ್ ಉಮೇಶ್ ಅವರು ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂಬ ಆರೋಪವಿದೆ. ತಹಶೀಲ್ದಾರ್ ಉಮೇಶ್ ಸೇರಿ ಮೂವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ತಹಶೀಲ್ದಾರ್ ಉಮೇಶ್, ಶಿರಸ್ತೆದಾರ್ ನಂಜುಂಡಯ್ಯ, ಆರ್. ಐ. ಬಸವರಾಜಪ್ಪ ವಿರುದ್ದ ಪ್ರಕರಣ ದಾಖಲಾಗಿದೆ.
ಕಡೂರು ಪೊಲೀಸ್ ಠಾಣೆಗೆ ಎಸಿ ಕಾಂತರಾಜ್ ದೂರು ನೀಡಿದ್ದಾರೆ. ಸದ್ಯ ತಹಶೀಲ್ದಾರ್ ಉಮೇಶ್
ಕಡೂರಿನಿಂದ ವರ್ಗಾವಣೆಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು