5:18 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ತಹಶೀಲ್ದಾರ್ ವಿರುದ್ಧ ಕ್ರಿಮಿನಲ್ ಕೇಸ್ : ಅಕ್ರಮ ಖಾತೆ ಮಾಡಿದ ಆರೋಪ; ಪೊಲೀಸರಿಗೆ ಉಪ ವಿಭಾಗಾಧಿಕಾರಿ ದೂರು

13/08/2023, 10:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸದ್ಯ ಕಡೂರಿನಿಂದ ವರ್ಗಾವಣೆಗೊಂಡಿರುವ ತಹಸೀಲ್ದಾರ್ ಉಮೇಶ್
ಅವರು ಕಾನೂನು ಬಾಹಿರವಾಗಿ ಖಾತೆ ಮಾಡಿಕೊಟ್ಟಿರುವ ಆರೋಪದ ಮೇಲೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.
ಉಪ ವಿಭಾಗಾಧಿಕಾರಿ ಡಾ.ಕಾಂತರಾಜ್ ಅವರು ತಹಶೀಲ್ದಾರರ್ ಉಮೇಶ್ ವಿರುದ್ದ ಕಡೂರು ಪೊಲೀಸರಿಗೆ
ದೂರು ನೀಡಿದ್ದಾರೆ.
ಸರ್ಕಾರಿ ಬೀಳು ಜಮೀನನ್ನು ಅಕ್ರಮವಾಗಿ ಜನರಿಗೆ ಖಾತೆ ಮಾಡಿಕೊಟ್ಟಿದ್ದ ಆರೋಪ
ತಹಶೀಲ್ದಾರ್ ಉಮೇಶ್ ಮೇಲಿದೆ. ಕಡೂರು ತಾಲೂಕಿನ ಉಳಿಗನಾರು ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಖಾತೆ ಮಾಡಿ ಕೊಡಲಾಗಿದೆ. ಗ್ರಾಮದ ಹನುಮಯ್ಯ, ರತ್ನಮ್ಮ, ನಾರಾಯಣಪ್ಪ, ಗೌರಮ್ಮಗೆ ಖಾತೆ ಮಾಡಿಕೊಟ್ಟಿರುವ ಆರೋಪ ತಹಶೀಲ್ದಾರ್ ಅವರ ಮೇಲಿದೆ. ಸರ್ಕಾರಿ ಬೀಳು ಜಮೀನನ್ನು ನಾಲ್ವರಿಗೆ ಖಾತೆ ಮಾಡಿಕೊಟ್ಟಿದ್ದಾರೆ. ಒಟ್ಟು
5.04 ಎಕರೆ ಸರ್ಕಾರಿ ಜಮೀನನ್ನ ಉಮೇಶ್ ಅವರು
ನಾಲ್ವರಿಗೆ ಖಾತೆ ಮಾಡಿಕೊಟ್ಟಿದ್ದಾರೆ.
ಕಾನೂನಿನ ನಿಯಮಗಳನ್ನು ಗಾಳಿ ತೂರಿ ತಹಶೀಲ್ದಾರ್ ಉಮೇಶ್ ಅವರು ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂಬ ಆರೋಪವಿದೆ. ತಹಶೀಲ್ದಾರ್ ಉಮೇಶ್ ಸೇರಿ ಮೂವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ತಹಶೀಲ್ದಾರ್ ಉಮೇಶ್, ಶಿರಸ್ತೆದಾರ್ ನಂಜುಂಡಯ್ಯ, ಆರ್. ಐ. ಬಸವರಾಜಪ್ಪ ವಿರುದ್ದ ಪ್ರಕರಣ ದಾಖಲಾಗಿದೆ.
ಕಡೂರು ಪೊಲೀಸ್ ಠಾಣೆಗೆ ಎಸಿ ಕಾಂತರಾಜ್ ದೂರು ನೀಡಿದ್ದಾರೆ. ಸದ್ಯ ತಹಶೀಲ್ದಾರ್ ಉಮೇಶ್
ಕಡೂರಿನಿಂದ ವರ್ಗಾವಣೆಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು