3:29 PM Monday8 - December 2025
ಬ್ರೇಕಿಂಗ್ ನ್ಯೂಸ್
ಕಿದ್ವಾಯಿ ಆಸ್ಪತ್ರೆ: ಒಂದೇ ಮೂತ್ರಪಿಂಡ ಹೊಂದಿದ್ದ ವಿಲ್ಮ್ಸ್ ಟ್ಯೂಮರ್ ಕಾಯಿಲೆಪೀಡಿತ ಬಾಲಕನಿಗೆ ಯಶಸ್ವಿ… ​ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ… ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ನನ್ನದು ಕೃಷ್ಣತತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ವ; ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ: ಕೇಂದ್ರ… Bagalkote | ಸಿದ್ಧಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ : ಚಲನಚಿತ್ರಗಳ ಆಹ್ವಾನ Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ…

ಇತ್ತೀಚಿನ ಸುದ್ದಿ

ಹಣಕ್ಕಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ವಿಧಾನ ಪರಿಷತ್ ನಲ್ಲಿ ಸಚಿವ ದಿನೇಶ್ ಗುಂಡೂರಾವ್

08/12/2025, 15:27

ಬೆಳಗಾವಿ ಸುವರ್ಣಸೌಧ,(reporterkarnataka.com): ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆಪಿಎಂಇbಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು.
ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು ನಿರ್ದಿಷ್ಟವಾಗಿ ಗುರುತಿಸಿರುವುದಿಲ್ಲ.
ಹಾಗೂ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡಿರುವ ಬಗ್ಗೆ, ಜಿಲ್ಲಾ, ಕೆ.ಪಿ.ಎಂ.ಇ. ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲಿ ಯಾವುದೇ ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗಿರುವುದಿಲ್ಲ.
ದೂರುಗಳು ಬಂದಲ್ಲಿ ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ ಪಿ ಎಂ ಇ ಅಧಿನಿಯಮದ ಸೆಕ್ಷನ್ 15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು ಎಂದರು.
ಗರ್ಭಿಣಿಯರಿಗೆ ತಪಾಸಣೆ ಮಾಡುವ ಸಂದರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಅನುಸರಿಬೇಕಾದ ನೀತಿ ನಿಯಮಗಳಿದ್ದು,ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ.ಪಿ.ಎಂ.ಇ, ಅಧಿನಿಯಮದ ಸೆಕ್ಷನ್15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು