7:28 PM Sunday28 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರ ಕೊಟ್ಟಿರುವುದು ಸಾಲ, ನಮ್ಮ ಪಾಲಿನ ಅನುದಾನವಲ್ಲ: ಸದನದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

17/03/2025, 13:06

ಬೆಂಗಳೂರು(reporterkarnataka.com): ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಬದಲಿಗೆ ಅವರು ಕೊಟ್ಟಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಗ್ಯಾರಂಟಿ ಯೋಜನೆಗಳನ್ನು ಮಾಧ್ಯಮಗಳು, ಜನರು, ವಿಶ್ವವಿದ್ಯಾನಿಲಯಗಳು, ವಿದ್ವಾಂಸರು ಶ್ಲಾಘಿಸಿದ್ದಾರೆ. ಕ್ಯಾಮರೂನ್ ದೇಶದ ಸುಲೇಮಾನ್ ಹ್ಯಾಂಕ್, ವಿಶ್ವಸಂಸ್ಥೆ ಜನರಲ್ ಬಾಡಿ ಅಧ್ಯಕ್ಷರು ಗ್ಯಾರಂಟಿಗಳನ್ನು ಒಪ್ಪಿಕೊಂಡಿದ್ದಾರೆ, ಮೆಚ್ಚಿಕೊಂಡಿದ್ದಾರೆ.
ಕನ್ನಡ ಮತ್ತು ಇಂಗ್ಲೀಷ್ ಪತ್ರಿಕೆಗಳು ಗ್ಯಾರಂಟಿಗಳನ್ನು ಶ್ಲಾಘಿಸಿ ಬರೆದಿರುವುದು ಸದನದ ಗಮನದಲ್ಲಿದ್ದರೂ ಬಿಜೆಪಿಯವರು ಸುಳ್ಳು ಹೇಳಿದ್ದಾರೆ. 2020ರಲ್ಲಿ ನಾವು ಗ್ಯಾರಂಟಿಗಳನ್ನು ಘೋಷಿಸಿದಾಗಲೂ ಪತ್ರಿಕೆಗಳು ಶ್ಲಾಘಿಸಿ ಬರೆದಿವೆ. ನೀವೆಲ್ಲಾ ಇದನ್ನು ವಿರೋದಿಸಿದ್ದೀರಿ ಎಂದು ಮುಖ್ಯಮಂತ್ರಿ ನುಡಿದರು.
ರಾಜ್ಯ ಸರ್ಕಾರ ಗ್ಯಾರಂಟಿ ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಅಭಿವೃದ್ಧಿಗೆ ಹಣವಿರುವುದಿಲ್ಲ ಎಂದು ನೀವು ಮಾತ್ರವಲ್ಲ ದೇಶದ ಪ್ರಧಾನಿಗಳು ಕೂಡ ಟೀಕಿಸಿದ್ದರು. ಆದರೆ ನೀವೇ ಲೋಕಸಭಾ ಚುನಾವಣೆಯಲ್ಲಿ ಮೋದಿ ಕಿ ಗ್ಯಾರಂಟಿ ಎಂದು ಘೋಷಣೆ ಮಾಡಿದ್ದೀರಿ. ಗ್ಯಾರಂಟಿಗಳನ್ನು ನಿರಂತರವಾಗಿ ವಿರೋಧಿಸಿದವರೆ ಈ ಕೆಲಸ ಮಾಡಿದ್ದೀರಿ. ಅನೇಕ ರಾಜ್ಯಗಳಲ್ಲಿ ಇದನ್ನು ನಕಲು ಮಾಡಿದ್ದೀರಿ. ಬಿಜೆಪಿಯವರು ವ್ಯಕ್ತಿ ಪೂಜೆಯನ್ನು ಕಲಿತಿದ್ದಾರೆ. ನಾವು ವ್ಯಕ್ತಿ ಪೂಜೆ ಮಾಡುವುದಿಲ್ಲವಾದ್ದರಿಂದ ಸಿದ್ದರಾಮಯ್ಯ ಗ್ಯಾರಂಟಿ ಎಂದು ಘೋಷಣೆ ಮಾಡಿಲ್ಲ. ನಾವು ರಾಜ್ಯದ ಜನರ ಗ್ಯಾರಂಟಿ ಎಂದು ಘೋಷಿಸಿದ್ದಾಗಿ ಟೀಕಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು