2:29 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರ ಕೊಟ್ಟಿರುವುದು ಸಾಲ, ನಮ್ಮ ಪಾಲಿನ ಅನುದಾನವಲ್ಲ: ಸದನದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

17/03/2025, 13:06

ಬೆಂಗಳೂರು(reporterkarnataka.com): ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಬದಲಿಗೆ ಅವರು ಕೊಟ್ಟಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಗ್ಯಾರಂಟಿ ಯೋಜನೆಗಳನ್ನು ಮಾಧ್ಯಮಗಳು, ಜನರು, ವಿಶ್ವವಿದ್ಯಾನಿಲಯಗಳು, ವಿದ್ವಾಂಸರು ಶ್ಲಾಘಿಸಿದ್ದಾರೆ. ಕ್ಯಾಮರೂನ್ ದೇಶದ ಸುಲೇಮಾನ್ ಹ್ಯಾಂಕ್, ವಿಶ್ವಸಂಸ್ಥೆ ಜನರಲ್ ಬಾಡಿ ಅಧ್ಯಕ್ಷರು ಗ್ಯಾರಂಟಿಗಳನ್ನು ಒಪ್ಪಿಕೊಂಡಿದ್ದಾರೆ, ಮೆಚ್ಚಿಕೊಂಡಿದ್ದಾರೆ.
ಕನ್ನಡ ಮತ್ತು ಇಂಗ್ಲೀಷ್ ಪತ್ರಿಕೆಗಳು ಗ್ಯಾರಂಟಿಗಳನ್ನು ಶ್ಲಾಘಿಸಿ ಬರೆದಿರುವುದು ಸದನದ ಗಮನದಲ್ಲಿದ್ದರೂ ಬಿಜೆಪಿಯವರು ಸುಳ್ಳು ಹೇಳಿದ್ದಾರೆ. 2020ರಲ್ಲಿ ನಾವು ಗ್ಯಾರಂಟಿಗಳನ್ನು ಘೋಷಿಸಿದಾಗಲೂ ಪತ್ರಿಕೆಗಳು ಶ್ಲಾಘಿಸಿ ಬರೆದಿವೆ. ನೀವೆಲ್ಲಾ ಇದನ್ನು ವಿರೋದಿಸಿದ್ದೀರಿ ಎಂದು ಮುಖ್ಯಮಂತ್ರಿ ನುಡಿದರು.
ರಾಜ್ಯ ಸರ್ಕಾರ ಗ್ಯಾರಂಟಿ ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಅಭಿವೃದ್ಧಿಗೆ ಹಣವಿರುವುದಿಲ್ಲ ಎಂದು ನೀವು ಮಾತ್ರವಲ್ಲ ದೇಶದ ಪ್ರಧಾನಿಗಳು ಕೂಡ ಟೀಕಿಸಿದ್ದರು. ಆದರೆ ನೀವೇ ಲೋಕಸಭಾ ಚುನಾವಣೆಯಲ್ಲಿ ಮೋದಿ ಕಿ ಗ್ಯಾರಂಟಿ ಎಂದು ಘೋಷಣೆ ಮಾಡಿದ್ದೀರಿ. ಗ್ಯಾರಂಟಿಗಳನ್ನು ನಿರಂತರವಾಗಿ ವಿರೋಧಿಸಿದವರೆ ಈ ಕೆಲಸ ಮಾಡಿದ್ದೀರಿ. ಅನೇಕ ರಾಜ್ಯಗಳಲ್ಲಿ ಇದನ್ನು ನಕಲು ಮಾಡಿದ್ದೀರಿ. ಬಿಜೆಪಿಯವರು ವ್ಯಕ್ತಿ ಪೂಜೆಯನ್ನು ಕಲಿತಿದ್ದಾರೆ. ನಾವು ವ್ಯಕ್ತಿ ಪೂಜೆ ಮಾಡುವುದಿಲ್ಲವಾದ್ದರಿಂದ ಸಿದ್ದರಾಮಯ್ಯ ಗ್ಯಾರಂಟಿ ಎಂದು ಘೋಷಣೆ ಮಾಡಿಲ್ಲ. ನಾವು ರಾಜ್ಯದ ಜನರ ಗ್ಯಾರಂಟಿ ಎಂದು ಘೋಷಿಸಿದ್ದಾಗಿ ಟೀಕಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು