8:15 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

ಊಟ ಮುಗಿಸಿ ಅರ್ಧ ತಾಸಿನಲ್ಲೇ ಎಂಟ್ರಿ ಕೊಟ್ಟ ಮುಖ್ಯಮಂತ್ರಿ: ರಿಲಾಕ್ಸ್ ಮೂಡ್ ನಲ್ಲಿದ್ದ ಅಧಿಕಾರಿಗಳು ಕಕ್ಕಾಬಿಕ್ಕಿ!!

30/05/2025, 18:03

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭಾ ಸಭಾಂಗಣದಲ್ಲಿ ಡಿಸಿ ಮತ್ತು ಸಿಇಒಗಳ ಜತೆ ನಡೆಸಿದ ಸಭೆಯಲ್ಲಿ ಮಧ್ಯಾಹ್ನ ಊಟದ ಬಿಡುವು ಮುಗಿಸಿ ಸರಿಯಾಗಿ 30 ನಿಮಿಷದಲ್ಲಿ ಸಿಎಂ ಎಂಟ್ರಿ ಕೊಟ್ಟಿದ್ದು, ಇನ್ನೂ ಊಟದ ರಿಲಾಕ್ಸ್ ಮೂಡ್ ನಲ್ಲಿದ್ದ ಅಧಿಕಾರಿಗಳು ಕಕ್ಕಾಬಿಕ್ಕಿಯಾದರು.
ಅಧಿಕಾರಿ ವರ್ಗಕ್ಕೆ ಮತ್ತು ಸಚಿವರುಗಳಿಗೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಮುಖ್ಯಮಂತ್ರಿಗಳು ಊಟಕ್ಕೆಂದು ಮನೆಗೆ ತೆರಳಿದರು. ಸಿಎಂ ಮನೆಗೆ ಹೋಗಿದ್ದರಿಂದ ಅವರು ಊಟ ಮುಗಿಸಿ ಬರುವುದು ಲೇಟಾಗಬಹುದು ಎಂದು ಅಧಿಕಾರಿಗಳು ರಿಲಾಕ್ಸ್ ಮೂಡ್ ನಲ್ಲಿ ಊಟ ಮಾಡುತ್ತಿದ್ದರು. ಆದರೆ, ಮುಖ್ಯಮಂತ್ರಿಗಳು ಊಟ ಮುಗಿಸಿ ಸರಿಯಾಗಿ 30 ನಿಮಿಷಕ್ಕೆ ಸಮ್ಮೇಳನ‌ ಸಭಾಂಗಣಕ್ಕೆ ಖಡಕ್ ಎಂಟ್ರಿ ಕೊಟ್ಟರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡು, “ಸರ್ ಅಧಿಕಾರಿಗಳು ಇನ್ನೂ ಊಟಕ್ಕೆ ಹೋಗಿದ್ದಾರೆ ಸರ್, ಬರ್ತಾರೆ ಎಂದು ಸಮಾಧಾನಗೊಳಿಸಿದರು.
ಮುಖ್ಯಮಂತ್ರಿಗಳು ಸರಿಯಾದ ಸಮಯಕ್ಕೆ ಬಂದ ಸುದ್ದಿ ಕೇಳಿ ಬ್ಯಾಂಕ್ವೆಂಟ್ ಹಾಲ್ ನಲ್ಲಿದ್ದ ಅಧಿಕಾರಿಗಳು, ಸಚಿವರು ತಡಬಡಾಯಿಸಿ ದೌಡಾಯಿಸಿದರು.‌
ಊಟಕ್ಕೆ ಬಿಡುವು ಕೊಡುವಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು 45 ನಿಮಿಷ ಬಿಡುವು ಕೊಡೋಣ ಎಂದಿದ್ದರು. ಮುಖ್ಯಮಂತ್ರಿಗಳು ಅರ್ಧ ಗಂಟೆ ಸಾಕು ಎಂದು ಹೇಳಿದ್ದರು. ತಮ್ಮ ಸೂಚನೆಯಂತೆ ಮುಖ್ಯಮಂತ್ರಿಗಳು ಸರಿಯಾಗಿ 30 ನಿಮಿಷಕ್ಕೆ ಬಂದಿದ್ದು ಅಧಿಕಾರಿಗಳು, ಸಚಿವರನ್ನು ಕಕ್ಕಾಬಿಕ್ಕಿಯಾಗಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು