9:41 AM Sunday1 - June 2025
ಬ್ರೇಕಿಂಗ್ ನ್ಯೂಸ್
ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆ ನಿಷೇಧ: ಸರಕಾರದ ಅಧಿಸೂಚನೆ Koppala | ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ: ರುದ್ರಣ್ಣ ಹರ್ತಿಕೋಟೆ ಇಬ್ಬರು ಮಕ್ಕಳು, ಎರಡೂ ಕಾಲು ಕಳೆದುಕೊಂಡ ಅಶ್ವಿನಿಗೆ ಸರಕಾರಿ ನೌಕರಿ ನೀಡಿ: ಬಿಜೆಪಿ… ಕೆಪಿಟಿಸಿಎಲ್ ಜಿಐಎಸ್ ಮ್ಯಾಪಿಂಗ್ ಅಪ್ಲಿಕೇಶನ್ ಬಿಡುಗಡೆ: ಭೂಗತ ಕೇಬಲ್ ಕಾಮಗಾರಿಗಳ ನೈಜ-ಸಮಯದ ಮಾಹಿತಿ… Mysore | ‘ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್’ ಗೆ ರಾಜ್ಯಪಾಲ ಥಾವರ್… ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ… ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ: ಕೊಚ್ಚಿಯಿಂದ ಬಂದ ಯುವಕನಿಗೆ… ಊಟ ಮುಗಿಸಿ ಅರ್ಧ ತಾಸಿನಲ್ಲೇ ಎಂಟ್ರಿ ಕೊಟ್ಟ ಮುಖ್ಯಮಂತ್ರಿ: ರಿಲಾಕ್ಸ್ ಮೂಡ್ ನಲ್ಲಿದ್ದ… ಮರೆಯಾದ ಭಾವಗೀತೆಗಳ ಭಾವ; ಅಗಲಿದ ಕಾವ್ಯ ಚೇತನ; ಕವಿ, ನಾಟಕಕಾರ ಡಾ.ಎಚ್. ಎಸ್.… KPCC president | 2028ರ ಚುನಾವಣೆಯಲ್ಲಿ ಹಾಸನದ 7 ಕ್ಷೇತ್ರಗಳಲ್ಲೂ ಗೆಲುವು: ಉಪ…

ಇತ್ತೀಚಿನ ಸುದ್ದಿ

ಊಟ ಮುಗಿಸಿ ಅರ್ಧ ತಾಸಿನಲ್ಲೇ ಎಂಟ್ರಿ ಕೊಟ್ಟ ಮುಖ್ಯಮಂತ್ರಿ: ರಿಲಾಕ್ಸ್ ಮೂಡ್ ನಲ್ಲಿದ್ದ ಅಧಿಕಾರಿಗಳು ಕಕ್ಕಾಬಿಕ್ಕಿ!!

30/05/2025, 18:03

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭಾ ಸಭಾಂಗಣದಲ್ಲಿ ಡಿಸಿ ಮತ್ತು ಸಿಇಒಗಳ ಜತೆ ನಡೆಸಿದ ಸಭೆಯಲ್ಲಿ ಮಧ್ಯಾಹ್ನ ಊಟದ ಬಿಡುವು ಮುಗಿಸಿ ಸರಿಯಾಗಿ 30 ನಿಮಿಷದಲ್ಲಿ ಸಿಎಂ ಎಂಟ್ರಿ ಕೊಟ್ಟಿದ್ದು, ಇನ್ನೂ ಊಟದ ರಿಲಾಕ್ಸ್ ಮೂಡ್ ನಲ್ಲಿದ್ದ ಅಧಿಕಾರಿಗಳು ಕಕ್ಕಾಬಿಕ್ಕಿಯಾದರು.
ಅಧಿಕಾರಿ ವರ್ಗಕ್ಕೆ ಮತ್ತು ಸಚಿವರುಗಳಿಗೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಮುಖ್ಯಮಂತ್ರಿಗಳು ಊಟಕ್ಕೆಂದು ಮನೆಗೆ ತೆರಳಿದರು. ಸಿಎಂ ಮನೆಗೆ ಹೋಗಿದ್ದರಿಂದ ಅವರು ಊಟ ಮುಗಿಸಿ ಬರುವುದು ಲೇಟಾಗಬಹುದು ಎಂದು ಅಧಿಕಾರಿಗಳು ರಿಲಾಕ್ಸ್ ಮೂಡ್ ನಲ್ಲಿ ಊಟ ಮಾಡುತ್ತಿದ್ದರು. ಆದರೆ, ಮುಖ್ಯಮಂತ್ರಿಗಳು ಊಟ ಮುಗಿಸಿ ಸರಿಯಾಗಿ 30 ನಿಮಿಷಕ್ಕೆ ಸಮ್ಮೇಳನ‌ ಸಭಾಂಗಣಕ್ಕೆ ಖಡಕ್ ಎಂಟ್ರಿ ಕೊಟ್ಟರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡು, “ಸರ್ ಅಧಿಕಾರಿಗಳು ಇನ್ನೂ ಊಟಕ್ಕೆ ಹೋಗಿದ್ದಾರೆ ಸರ್, ಬರ್ತಾರೆ ಎಂದು ಸಮಾಧಾನಗೊಳಿಸಿದರು.
ಮುಖ್ಯಮಂತ್ರಿಗಳು ಸರಿಯಾದ ಸಮಯಕ್ಕೆ ಬಂದ ಸುದ್ದಿ ಕೇಳಿ ಬ್ಯಾಂಕ್ವೆಂಟ್ ಹಾಲ್ ನಲ್ಲಿದ್ದ ಅಧಿಕಾರಿಗಳು, ಸಚಿವರು ತಡಬಡಾಯಿಸಿ ದೌಡಾಯಿಸಿದರು.‌
ಊಟಕ್ಕೆ ಬಿಡುವು ಕೊಡುವಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು 45 ನಿಮಿಷ ಬಿಡುವು ಕೊಡೋಣ ಎಂದಿದ್ದರು. ಮುಖ್ಯಮಂತ್ರಿಗಳು ಅರ್ಧ ಗಂಟೆ ಸಾಕು ಎಂದು ಹೇಳಿದ್ದರು. ತಮ್ಮ ಸೂಚನೆಯಂತೆ ಮುಖ್ಯಮಂತ್ರಿಗಳು ಸರಿಯಾಗಿ 30 ನಿಮಿಷಕ್ಕೆ ಬಂದಿದ್ದು ಅಧಿಕಾರಿಗಳು, ಸಚಿವರನ್ನು ಕಕ್ಕಾಬಿಕ್ಕಿಯಾಗಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು