11:27 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..!

07/05/2026, 22:21

ಚಿಕ್ಕಬಳ್ಳಾಪುರ(reporterkarnataka.com): ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರಕ್ತಸಂಬಂಧದ ಮನ್ನಣೆಯನ್ನೇ ಮರೆತು ಅಕ್ಕ-ತಮ್ಮ ಹಸೆಮಣೆ ಏರಿರುವ ವಿಲಕ್ಷಣ ಘಟನೆ ನಡೆದಿದೆ. ವರಸೆಯಲ್ಲಿ ಅಕ್ಕ-ತಮ್ಮನಾಗಬೇಕಿದ್ದ ಜೋಡಿ ಈಗ ಸಪ್ತಪದಿ ತುಳಿಯುವ ಮೂಲಕ ಸಾಮಾಜಿಕ ಚರ್ಚೆಗೆ ಗ್ರಾಸವಾಗಿದ್ದಾರೆ.ದೇವನಹಳ್ಳಿಯ ಸಾವಕನಹಳ್ಳಿ ಮೂಲದ ಶಶಿಕಲಾ ಹಾಗೂ ಹೊಸಕೋಟೆಯ ಪ್ರವೀಣ್ ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ವಿಶೇಷವೆಂದರೆ, ಇವರಿಬ್ಬರ ತಾಯಂದಿರು ಸ್ವಂತ ಅಕ್ಕ-ತಂಗಿಯರು. ಅಂದರೆ ವರಸೆಯಲ್ಲಿ ಶಶಿಕಲಾ ಮತ್ತು ಪ್ರವೀಣ್ ಅಕ್ಕ-ತಮ್ಮನಾಗಬೇಕು. ಆದರೆ ಈ ಸಂಬಂಧದ ಗಡಿಯನ್ನು ಮೀರಿ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು.
ಶಶಿಕಲಾಗೆ ಪೋಷಕರು ಬೇರೊಬ್ಬ ಯುವಕನ ಜೊತೆ ಮದುವೆ ನಿಶ್ಚಯಿಸಿ, ಲಗ್ನಪತ್ರಿಕೆಯನ್ನೂ ಹಂಚಿದ್ದರು. ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಶಶಿಕಲಾ ತನ್ನ ಪ್ರಿಯಕರ ಪ್ರವೀಣ್ ಜೊತೆ ಪರಾರಿಯಾಗಿದ್ದಳು. ನಂತರ ಇಬ್ಬರೂ ಅಂಗಟ್ಟದ ಶಿವನ ಗುಡಿಯಲ್ಲಿ ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದಾರೆ.
ಮದುವೆಯ ನಂತರ ಪೋಷಕರಿಂದ ಜೀವ ಬೆದರಿಕೆ ಇದೆ ಎಂದು ಆರೋಪಿಸಿರುವ ನವಜೋಡಿ, ರಕ್ಷಣೆ ಕೋರಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಧಾವಿಸಿದ್ದಾರೆ. ಈ ವೇಳೆ ಕಚೇರಿ ಆವರಣದಲ್ಲಿ ಹೈಡ್ರಾಮಾ ನಡೆದಿದ್ದು, ಮಗಳ ಮದುವೆಯನ್ನು ಕಂಡು ತಾಯಿ ಆಕ್ರಂದನ ಮುಗಿಲು ಮುಟ್ಟಿತ್ತು. ಅಕ್ಕನ ಮಗಳಾಗಿ ತಮ್ಮನನ್ನೇ ಮದುವೆಯಾಗಿದ್ದೀಯಲ್ಲಾ, ಈ ಸಂಬಂಧ ಸಮಾಜ ಒಪ್ಪುತ್ತದೆಯೇ?” ಎಂದು ತಾಯಿ ಮಗಳನ್ನು ಪ್ರಶ್ನಿಸಿ ಕಣ್ಣೀರಿಟ್ಟರು.
ಆದರೆ, ಯಾವುದಕ್ಕೂ ಮಣಿಯದ ಶಶಿಕಲಾ, ನನಗೆ ಪ್ರಿಯಕರನೇ ಸರ್ವಸ್ವ, ನಾನು ಪೋಷಕರ ಜೊತೆ ಹೋಗುವುದಿಲ್ಲ” ಎಂದು ಪಟ್ಟು ಹಿಡಿದಿದ್ದಾಳೆ. ಪ್ರಸ್ತುತ ಈ ವಿಲಕ್ಷಣ ಮದುವೆ ಪ್ರಕರಣ ಜಿಲ್ಲೆಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು