6:17 AM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ʼThe Idea of Bharath’: ಫೆಬ್ರವರಿ 18 ಮತ್ತು 19ರಂದು ಮಂಗಳೂರು ಲಿಟ್‌ಫೆಸ್ಟ್‌ನ 5ನೇ ಆವೃತ್ತಿ

14/02/2023, 21:35

ಮಂಗಳೂರು(reporterkarnataka.com): ಮಂಗಳೂರು ಲಿಟ್‌ ಫೆಸ್ಟ್‌ನ ಐದನೇ ಆವೃತ್ತಿಯು ʼThe Idea of Bharath’ ಎಂಬ ಥೀಮ್‌ನಡಿಯಲ್ಲಿ ಫೆಬ್ರವರಿ 18 ಮತ್ತು 19 ರಂದು ಎರಡು ದಿನಗಳ ಕಾಲ ನಗರದ ಟಿಎಂಎ ಪೈ ಇಂಟರ್‌ನ್ಯಾಷನಲ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಜರುಗಲಿದೆ.

ಒಟ್ಟು 25 ಸೆಷನ್‌ಗಳ ವಿಚಾರ ಸಂಕಿರಣ ಆಯೋಜಿಸಲಾಗಿದ್ದು, ಇದರಲ್ಲಿ 55 ಕ್ಕೂ ಅಧಿಕ ವಾಗ್ಮಿಗಳು ಭಾಗವಹಿಸಲಿದ್ದಾರೆ. ಪ್ರತಿ ಸೆಷನ್‌ನ ಕೊನೆಗೆ ಸಾಹಿತ್ಯಕ್ಕೆ ಸಂಬಂಧಿಸಿದ ರಸಪ್ರಶ್ನೆ ಇರಲಿದ್ದು, ಗೆದ್ದವರಿಗೆ ಪುಸ್ತಕವನ್ನು ಬಹುಮಾನವಾಗಿ ನೀಡಲಾಗುತ್ತದೆ.
ಲಿಟ್‌ ಫೆಸ್ಟ್‌ನಲ್ಲಿ 2 ಸಿನಿಮಾಗಳ ಪ್ರದರ್ಶನ ಜರುಗಲಿದೆ. ಅಲ್ಲದೇ 16 ಪುಸ್ತಕ ಮಳಿಗೆಗಳು ಕೂಡ ಇರಲಿವೆ. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ತುಕಾರಾಮ್ ಪೂಜಾರಿ ಅವರಿಗೆ ಈ ಬಾರಿಯ ಪ್ರಶಸ್ತಿ ಪ್ರದಾನಿಸಲಾಗುತ್ತಿದೆ. ಪುಸ್ತಕ ಮಳಿಗೆ, ತುಳು ಅಕ್ಷರ ಕಲಿಕಾ ಕಾರ್ಯಾಗಾರ, ಮಕ್ಕಳ ಸಾಹಿತ್ಯ ಅಭಿರುಚಿ ಮತ್ತು ಕಥೆಯ ಬಗ್ಗೆ ಪಾಲಕರಿಗೆ ಆಸಕ್ತಿ ಬೆಳೆಸುವ ದೃಷ್ಟಿಯಿಂದ ಅವಧಿ, ಲೇಖಕರೊಂದಿಗೆ ಸಂವಾದ – (ಹರಟೆ ಕಟ್ಟೆ) ಈ ಬಾರಿಯ ಲಿಟ್ ಫೆಸ್ಟ್‌ನ ವಿಶೇಷತೆಯಾಗಿದೆ.

ಉದ್ಘಾಟನಾ ಅವಧಿ ʼThe Idea of Bharath In Amrithkal: Reclaiming The Right Path-The Way Forward ಪರಿಕಲ್ಪನೆಯ ಅಡಿ ಜರುಗಲಿದ್ದು, ಆರ್‌. ಜಗ್ನನಾಥ್‌, ವಿನಯ್‌ ಹೆಗ್ಡೆ, ವಿ. ನಾಗರಾಜ್‌ ಅವರು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು