2:55 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ʼThe Idea of Bharath’: ಫೆಬ್ರವರಿ 18 ಮತ್ತು 19ರಂದು ಮಂಗಳೂರು ಲಿಟ್‌ಫೆಸ್ಟ್‌ನ 5ನೇ ಆವೃತ್ತಿ

14/02/2023, 21:35

ಮಂಗಳೂರು(reporterkarnataka.com): ಮಂಗಳೂರು ಲಿಟ್‌ ಫೆಸ್ಟ್‌ನ ಐದನೇ ಆವೃತ್ತಿಯು ʼThe Idea of Bharath’ ಎಂಬ ಥೀಮ್‌ನಡಿಯಲ್ಲಿ ಫೆಬ್ರವರಿ 18 ಮತ್ತು 19 ರಂದು ಎರಡು ದಿನಗಳ ಕಾಲ ನಗರದ ಟಿಎಂಎ ಪೈ ಇಂಟರ್‌ನ್ಯಾಷನಲ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಜರುಗಲಿದೆ.

ಒಟ್ಟು 25 ಸೆಷನ್‌ಗಳ ವಿಚಾರ ಸಂಕಿರಣ ಆಯೋಜಿಸಲಾಗಿದ್ದು, ಇದರಲ್ಲಿ 55 ಕ್ಕೂ ಅಧಿಕ ವಾಗ್ಮಿಗಳು ಭಾಗವಹಿಸಲಿದ್ದಾರೆ. ಪ್ರತಿ ಸೆಷನ್‌ನ ಕೊನೆಗೆ ಸಾಹಿತ್ಯಕ್ಕೆ ಸಂಬಂಧಿಸಿದ ರಸಪ್ರಶ್ನೆ ಇರಲಿದ್ದು, ಗೆದ್ದವರಿಗೆ ಪುಸ್ತಕವನ್ನು ಬಹುಮಾನವಾಗಿ ನೀಡಲಾಗುತ್ತದೆ.
ಲಿಟ್‌ ಫೆಸ್ಟ್‌ನಲ್ಲಿ 2 ಸಿನಿಮಾಗಳ ಪ್ರದರ್ಶನ ಜರುಗಲಿದೆ. ಅಲ್ಲದೇ 16 ಪುಸ್ತಕ ಮಳಿಗೆಗಳು ಕೂಡ ಇರಲಿವೆ. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ತುಕಾರಾಮ್ ಪೂಜಾರಿ ಅವರಿಗೆ ಈ ಬಾರಿಯ ಪ್ರಶಸ್ತಿ ಪ್ರದಾನಿಸಲಾಗುತ್ತಿದೆ. ಪುಸ್ತಕ ಮಳಿಗೆ, ತುಳು ಅಕ್ಷರ ಕಲಿಕಾ ಕಾರ್ಯಾಗಾರ, ಮಕ್ಕಳ ಸಾಹಿತ್ಯ ಅಭಿರುಚಿ ಮತ್ತು ಕಥೆಯ ಬಗ್ಗೆ ಪಾಲಕರಿಗೆ ಆಸಕ್ತಿ ಬೆಳೆಸುವ ದೃಷ್ಟಿಯಿಂದ ಅವಧಿ, ಲೇಖಕರೊಂದಿಗೆ ಸಂವಾದ – (ಹರಟೆ ಕಟ್ಟೆ) ಈ ಬಾರಿಯ ಲಿಟ್ ಫೆಸ್ಟ್‌ನ ವಿಶೇಷತೆಯಾಗಿದೆ.

ಉದ್ಘಾಟನಾ ಅವಧಿ ʼThe Idea of Bharath In Amrithkal: Reclaiming The Right Path-The Way Forward ಪರಿಕಲ್ಪನೆಯ ಅಡಿ ಜರುಗಲಿದ್ದು, ಆರ್‌. ಜಗ್ನನಾಥ್‌, ವಿನಯ್‌ ಹೆಗ್ಡೆ, ವಿ. ನಾಗರಾಜ್‌ ಅವರು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು