4:02 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ʼThe Idea of Bharath’: ಫೆಬ್ರವರಿ 18 ಮತ್ತು 19ರಂದು ಮಂಗಳೂರು ಲಿಟ್‌ಫೆಸ್ಟ್‌ನ 5ನೇ ಆವೃತ್ತಿ

14/02/2023, 21:35

ಮಂಗಳೂರು(reporterkarnataka.com): ಮಂಗಳೂರು ಲಿಟ್‌ ಫೆಸ್ಟ್‌ನ ಐದನೇ ಆವೃತ್ತಿಯು ʼThe Idea of Bharath’ ಎಂಬ ಥೀಮ್‌ನಡಿಯಲ್ಲಿ ಫೆಬ್ರವರಿ 18 ಮತ್ತು 19 ರಂದು ಎರಡು ದಿನಗಳ ಕಾಲ ನಗರದ ಟಿಎಂಎ ಪೈ ಇಂಟರ್‌ನ್ಯಾಷನಲ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಜರುಗಲಿದೆ.

ಒಟ್ಟು 25 ಸೆಷನ್‌ಗಳ ವಿಚಾರ ಸಂಕಿರಣ ಆಯೋಜಿಸಲಾಗಿದ್ದು, ಇದರಲ್ಲಿ 55 ಕ್ಕೂ ಅಧಿಕ ವಾಗ್ಮಿಗಳು ಭಾಗವಹಿಸಲಿದ್ದಾರೆ. ಪ್ರತಿ ಸೆಷನ್‌ನ ಕೊನೆಗೆ ಸಾಹಿತ್ಯಕ್ಕೆ ಸಂಬಂಧಿಸಿದ ರಸಪ್ರಶ್ನೆ ಇರಲಿದ್ದು, ಗೆದ್ದವರಿಗೆ ಪುಸ್ತಕವನ್ನು ಬಹುಮಾನವಾಗಿ ನೀಡಲಾಗುತ್ತದೆ.
ಲಿಟ್‌ ಫೆಸ್ಟ್‌ನಲ್ಲಿ 2 ಸಿನಿಮಾಗಳ ಪ್ರದರ್ಶನ ಜರುಗಲಿದೆ. ಅಲ್ಲದೇ 16 ಪುಸ್ತಕ ಮಳಿಗೆಗಳು ಕೂಡ ಇರಲಿವೆ. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ತುಕಾರಾಮ್ ಪೂಜಾರಿ ಅವರಿಗೆ ಈ ಬಾರಿಯ ಪ್ರಶಸ್ತಿ ಪ್ರದಾನಿಸಲಾಗುತ್ತಿದೆ. ಪುಸ್ತಕ ಮಳಿಗೆ, ತುಳು ಅಕ್ಷರ ಕಲಿಕಾ ಕಾರ್ಯಾಗಾರ, ಮಕ್ಕಳ ಸಾಹಿತ್ಯ ಅಭಿರುಚಿ ಮತ್ತು ಕಥೆಯ ಬಗ್ಗೆ ಪಾಲಕರಿಗೆ ಆಸಕ್ತಿ ಬೆಳೆಸುವ ದೃಷ್ಟಿಯಿಂದ ಅವಧಿ, ಲೇಖಕರೊಂದಿಗೆ ಸಂವಾದ – (ಹರಟೆ ಕಟ್ಟೆ) ಈ ಬಾರಿಯ ಲಿಟ್ ಫೆಸ್ಟ್‌ನ ವಿಶೇಷತೆಯಾಗಿದೆ.

ಉದ್ಘಾಟನಾ ಅವಧಿ ʼThe Idea of Bharath In Amrithkal: Reclaiming The Right Path-The Way Forward ಪರಿಕಲ್ಪನೆಯ ಅಡಿ ಜರುಗಲಿದ್ದು, ಆರ್‌. ಜಗ್ನನಾಥ್‌, ವಿನಯ್‌ ಹೆಗ್ಡೆ, ವಿ. ನಾಗರಾಜ್‌ ಅವರು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು