11:00 PM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮುಂದಿನ ತಲೆಮಾರಿಗೆ ಪ್ರಕೃತಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಡಾ. ಜಿ. ಸಂತೋಷ್

05/08/2026, 10:40

ಮಂಗಳೂರು(reporterkarnataka.com): ನಮ್ಮ ಸುತ್ತಲಿನ ಪರಿಸರ ನಾವೇ ಹಾಳು ಮಾಡುತ್ತಿದ್ದೇವೆ. 2019ರಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನಡೆದ ಭೀಕರ ಪ್ರಕೃತಿ ದುರಂತಕ್ಕೆ ನಮ್ಮ ಸ್ವಾರ್ಥ ಮತ್ತು ಬೇಜವಾಬ್ದಾರಿತನವೇ ಮೂಲ ಕಾರಣ ಎಂದು ಜಿಲ್ಲಾ ನಗರಾಭಿವೃದ್ಧಿ ಸೆಲ್‌ನ ಯೋಜನಾ ನಿರ್ದೇಶಕ ಡಾ. ಜಿ. ಸಂತೋಷ್ ಕುಮಾರ್‌ ಹೇಳಿದರು.
ಮಂಗಳೂರು ಕಥೋಲಿಕ್ ಧರ್ಮಪ್ರಾಂತ್ಯದ ಪರಿಸರ ಆಯೋಗದ ನೇತೃತ್ವದಲ್ಲಿ ನಗರದ ಬೆಂದೂರ್ ಚರ್ಚ್‌ನ ಸಭಾಂಗಣದಲ್ಲಿ ಪರಿಸರ ಆಯೋಗದ ಸಂಚಾಲಕರು ಹಾಗೂ ಕಾರ್ಯದರ್ಶಿಗಳಿಗಾಗಿ ಆಯೋಜಿಸಲಾಗಿದ್ದ ವಿಶೇಷ ಪರಿಸರ ಮಾಹಿತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.


ನಮ್ಮ ದೇಶದಲ್ಲಿ ಪರಿಸರವನ್ನು ಉಳಿಸಿ, ಸಂರಕ್ಷಿಸುವ ಕಾರ್ಯ ಯುದ್ಧೋಪಾದಿಯಲ್ಲಿ ಆಗಬೇಕು. ಪ್ರಕೃತಿಯನ್ನು ಹಾಳು ಮಾಡಿದ್ದರಿಂದಲೇ ಇಂದು ನಾವು ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಪರಿಸರವನ್ನು ಕಾಪಾಡಿ, ಅದನ್ನು ನಮ್ಮ ಮುಂದಿನ ತಲೆಮಾರಿಗೆ ಸುರಕ್ಷಿತವಾಗಿ ನೀಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ರಾಜೇಂದ್ರ ಕಲ್ಬಾವಿ ಹಾಗೂ ಹಸಿರು ದಳದ ಪ್ರಾಜೆಕ್ಟ್ ಮ್ಯಾನೇಜರ್ ನಾಗರಾಜ್ ಬಜಾಲ್ ಅವರು ಪರಿಸರ ಸಂರಕ್ಷಣೆಯ ಪ್ರಾಯೋಗಿಕ ಮಾರ್ಗಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಧರ್ಮಕ್ಷೇತ್ರದ ಪರಿಸರ ಆಯೋಗದ ಕಾರ್ಯದರ್ಶಿ ಲುವಿಸ್ ಜೆ. ಪಿಂಟೊ, ಪರಿಸರ ಆಯೋಗದ ಕಾರ್ಯಕಾರಿ ಸಮಿತಿ ಸದಸ್ಯ ವಂ| ಡಾ| ಮೈಕಲ್ ಸಾಂತುಮಾಯೋರ್, ಫಾದರ್ ಮುಲ್ಲರ್‌ ಸಂಸ್ಥೆಗಳ ನಿರ್ದೇಶಕ ವಂ| ಫಾ| ಫಾವುಸ್ಟಿನ್ ಲೋಬೊ, ಭ| ಪ್ಲಾವಿಯ ವಿಲ್ಮಾ, ಸೆಲೆಸ್ತಿನ್ ಡಿಸೋಜ, ಕ್ಲೇಮಂಟ್ ಪಿಂಟೊ, ಫ್ರಾನ್ಸಿಸ್ ಮಿನೇಜಸ್ ಬಾಲ್ಕುಟಜೆ, ಜೀತ್ ಮಿಲನ್ ರೋಚ್, ಚಾರ್ಲ್ಸ್ ಪಾಯ್ಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು