9:52 PM Sunday1 - June 2025
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹುಕ್ಕಾ ಬಾರ್ ಗಳ ನಿಷೇಧಕ್ಕೆ ರಾಷ್ಟ್ರಪತಿ ಅಂಕಿತ: ತಂಬಾಕು ಉತ್ಪನ್ನ ಖರೀದಿ… ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆ ನಿಷೇಧ: ಸರಕಾರದ ಅಧಿಸೂಚನೆ Koppala | ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ: ರುದ್ರಣ್ಣ ಹರ್ತಿಕೋಟೆ ಇಬ್ಬರು ಮಕ್ಕಳು, ಎರಡೂ ಕಾಲು ಕಳೆದುಕೊಂಡ ಅಶ್ವಿನಿಗೆ ಸರಕಾರಿ ನೌಕರಿ ನೀಡಿ: ಬಿಜೆಪಿ… ಕೆಪಿಟಿಸಿಎಲ್ ಜಿಐಎಸ್ ಮ್ಯಾಪಿಂಗ್ ಅಪ್ಲಿಕೇಶನ್ ಬಿಡುಗಡೆ: ಭೂಗತ ಕೇಬಲ್ ಕಾಮಗಾರಿಗಳ ನೈಜ-ಸಮಯದ ಮಾಹಿತಿ… Mysore | ‘ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್’ ಗೆ ರಾಜ್ಯಪಾಲ ಥಾವರ್… ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ… ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ: ಕೊಚ್ಚಿಯಿಂದ ಬಂದ ಯುವಕನಿಗೆ… ಊಟ ಮುಗಿಸಿ ಅರ್ಧ ತಾಸಿನಲ್ಲೇ ಎಂಟ್ರಿ ಕೊಟ್ಟ ಮುಖ್ಯಮಂತ್ರಿ: ರಿಲಾಕ್ಸ್ ಮೂಡ್ ನಲ್ಲಿದ್ದ…

ಇತ್ತೀಚಿನ ಸುದ್ದಿ

ಮರೆಯಾದ ಭಾವಗೀತೆಗಳ ಭಾವ; ಅಗಲಿದ ಕಾವ್ಯ ಚೇತನ; ಕವಿ, ನಾಟಕಕಾರ ಡಾ.ಎಚ್. ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಗಣ್ಯರ ಸಂತಾಪ

30/05/2025, 11:13

ಬೆಂಗಳೂರು(reporterkarnataka.com): ಕನ್ನಡ ಭಾವಗೀತೆಗಳ ಭವ್ಯ ಪರಂಪರೆಯ ಪ್ರತಿನಿಧಿ ಡಾ. ಎಚ್.ಎಸ್. ವೆಂಕಟೇಶಮೂರ್ತಿ ಅವರು ಇಂದು ಮುಂಜಾನೆ ನಿಧನರಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಸಹಿತ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡ ಕಾವ್ಯ ಲೋಕಕ್ಕೆಅತಿ ದೊಡ್ಡ ಆಘಾತ ತಂದಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಇಂದು ಮುಂಜಾನೆ ಡಾ. ಎಚ್ಎಸ್ ವಿ ಅವರ ನಿಧನದ ಸುದ್ದಿ ಬಂದ ಕೂಡಲೇ ದಿಗ್ಭ್ರಮೆ ಆಯಿತು. ಕನ್ನಡ ಸಾಹಿತ್ಯದ ಕಾವ್ಯ ಪರಂಪರೆಗೆ ಹೊಸ ಭಾಷ್ಯ ಬರೆದ ಕವಿ ಎಚ್ಎಸ್ ವಿ ಅವರು. ಸದಾ ನಮ್ಮ ಕಿವಿಗಳಲ್ಲಿ ಅನುರಣಿಸುವ ಅವರ ಗೀತೆಗಳು ಸೊಗಸು ಅನನ್ಯವಾದದ್ದು, ಅದು ತೂಗು ಮಂಚದಲ್ಲಿ, ಅಮ್ಮ ನಾನು ದೇವರಾಣೆ, ಲೋಕದ ಕಣ್ಣಿಗೆ ರಾಧೆಯು ಕೂಡ, ಹುಚ್ಚು ಕೋಡಿ ಮನಸು, ಇಂತಹ ಯಾವುದೇ ಗೀತೆಗಳು ನಮ್ಮನ್ನು ಬೇರೊಂದು ಲೋಕದ ಭಾವಲಹರಿಗೆ ಕೊಂಡೊಯ್ಯುತ್ತವೆ.
ಇಂತಹ ಗೀತೆಗಳನ್ನು ಕೊಟ್ಟ ಕವಿ ನಮ್ಮನ್ನು ಇಂದು ಅಗಲಿದ್ದಾರೆ. ನೂರಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಕೊಟ್ಟ ಡಾ. ಎಚ್ ಎಸ್ ವಿ ಬರೀ ಕವಿಯಾಗಿಯಲ್ಲ, ನಾಟಕಕಾರರಾಗಿ, ಅಂಕಣಕಾರರಾಗಿ, ಅನುವಾದ ,ಶಿಶು ಸಾಹಿತ್ಯ, ಹೀಗೆ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ತಮ್ಮ ಅನನ್ಯ ಕೊಡುಗೆ ಕೊಟ್ಟಿದ್ದಾರೆ. ಬುದ್ಧ ಚರಣ ಮಹಾ ಕಾವ್ಯದ ಮೂಲಕ ಅವರು ಸಾಹಿತ್ಯದ ಮತ್ತೊಂದು ಮಜಲನ್ನು ಸ್ಪರ್ಶಿಸಿದ್ದಾರೆ.
ಕನ್ನಡ ಸಾಹಿತ್ಯ ಅದರಲ್ಲಿಯೂ ವಿಶೇಷವಾಗಿ ಭಾವಗೀತೆಗಳ ಕ್ಷೇತ್ರಕ್ಕೆ ಅವರು ಕೊಟ್ಟ ಕೊಡುಗೆ ಅದ್ಭುತವಾದದ್ದು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಸೇರಿದಂತೆ ನೂರಾರು ಗೌರವ ಸನ್ಮಾನಗಳಿಗೆ ಪಾತ್ರರಾಗಿದ್ದ
ಅವರ ನಿಧನದಿಂದ ಕನ್ನಡ ಸಾಂಸ್ಕೃತಿಕ ಲೋಕ ಮಹತ್ವದ ಚೇತನವೊಂದನ್ನು ಕಳೆದುಕೊಂಡಿದೆ .
ಭಗವಂತ ಅವರ ಆತ್ಮಕ್ಕೆ ಶಾಂತಿ ಕೊಡಲಿ, ಅವರ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು