2:33 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಮರೆಯಾದ ಭಾವಗೀತೆಗಳ ಭಾವ; ಅಗಲಿದ ಕಾವ್ಯ ಚೇತನ; ಕವಿ, ನಾಟಕಕಾರ ಡಾ.ಎಚ್. ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಗಣ್ಯರ ಸಂತಾಪ

30/05/2025, 11:13

ಬೆಂಗಳೂರು(reporterkarnataka.com): ಕನ್ನಡ ಭಾವಗೀತೆಗಳ ಭವ್ಯ ಪರಂಪರೆಯ ಪ್ರತಿನಿಧಿ ಡಾ. ಎಚ್.ಎಸ್. ವೆಂಕಟೇಶಮೂರ್ತಿ ಅವರು ಇಂದು ಮುಂಜಾನೆ ನಿಧನರಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಸಹಿತ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡ ಕಾವ್ಯ ಲೋಕಕ್ಕೆಅತಿ ದೊಡ್ಡ ಆಘಾತ ತಂದಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಇಂದು ಮುಂಜಾನೆ ಡಾ. ಎಚ್ಎಸ್ ವಿ ಅವರ ನಿಧನದ ಸುದ್ದಿ ಬಂದ ಕೂಡಲೇ ದಿಗ್ಭ್ರಮೆ ಆಯಿತು. ಕನ್ನಡ ಸಾಹಿತ್ಯದ ಕಾವ್ಯ ಪರಂಪರೆಗೆ ಹೊಸ ಭಾಷ್ಯ ಬರೆದ ಕವಿ ಎಚ್ಎಸ್ ವಿ ಅವರು. ಸದಾ ನಮ್ಮ ಕಿವಿಗಳಲ್ಲಿ ಅನುರಣಿಸುವ ಅವರ ಗೀತೆಗಳು ಸೊಗಸು ಅನನ್ಯವಾದದ್ದು, ಅದು ತೂಗು ಮಂಚದಲ್ಲಿ, ಅಮ್ಮ ನಾನು ದೇವರಾಣೆ, ಲೋಕದ ಕಣ್ಣಿಗೆ ರಾಧೆಯು ಕೂಡ, ಹುಚ್ಚು ಕೋಡಿ ಮನಸು, ಇಂತಹ ಯಾವುದೇ ಗೀತೆಗಳು ನಮ್ಮನ್ನು ಬೇರೊಂದು ಲೋಕದ ಭಾವಲಹರಿಗೆ ಕೊಂಡೊಯ್ಯುತ್ತವೆ.
ಇಂತಹ ಗೀತೆಗಳನ್ನು ಕೊಟ್ಟ ಕವಿ ನಮ್ಮನ್ನು ಇಂದು ಅಗಲಿದ್ದಾರೆ. ನೂರಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಕೊಟ್ಟ ಡಾ. ಎಚ್ ಎಸ್ ವಿ ಬರೀ ಕವಿಯಾಗಿಯಲ್ಲ, ನಾಟಕಕಾರರಾಗಿ, ಅಂಕಣಕಾರರಾಗಿ, ಅನುವಾದ ,ಶಿಶು ಸಾಹಿತ್ಯ, ಹೀಗೆ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ತಮ್ಮ ಅನನ್ಯ ಕೊಡುಗೆ ಕೊಟ್ಟಿದ್ದಾರೆ. ಬುದ್ಧ ಚರಣ ಮಹಾ ಕಾವ್ಯದ ಮೂಲಕ ಅವರು ಸಾಹಿತ್ಯದ ಮತ್ತೊಂದು ಮಜಲನ್ನು ಸ್ಪರ್ಶಿಸಿದ್ದಾರೆ.
ಕನ್ನಡ ಸಾಹಿತ್ಯ ಅದರಲ್ಲಿಯೂ ವಿಶೇಷವಾಗಿ ಭಾವಗೀತೆಗಳ ಕ್ಷೇತ್ರಕ್ಕೆ ಅವರು ಕೊಟ್ಟ ಕೊಡುಗೆ ಅದ್ಭುತವಾದದ್ದು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಸೇರಿದಂತೆ ನೂರಾರು ಗೌರವ ಸನ್ಮಾನಗಳಿಗೆ ಪಾತ್ರರಾಗಿದ್ದ
ಅವರ ನಿಧನದಿಂದ ಕನ್ನಡ ಸಾಂಸ್ಕೃತಿಕ ಲೋಕ ಮಹತ್ವದ ಚೇತನವೊಂದನ್ನು ಕಳೆದುಕೊಂಡಿದೆ .
ಭಗವಂತ ಅವರ ಆತ್ಮಕ್ಕೆ ಶಾಂತಿ ಕೊಡಲಿ, ಅವರ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು