3:26 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು: ಶಾಸಕ ಪೊನ್ನಣ್ಣ

11/07/2025, 17:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಮುಂದಿನ 3 ತಿಂಗಳಲ್ಲಿ ಜಿಲ್ಲೆಯ ಅದಿವಾಸಿಗಳಿಗೆ ಮುಖ್ಮಮಂತ್ರಿಗಳಿಂದ ಹಕ್ಕು ಪತ್ರ ವಿತರಣೆಯ ಮಹತ್ವದ ತೀಮಾ೯ನ ಕೈ ಗೊಳ್ಳಲಾಗಿದೆ.
ಎಂದು ಶಾಸಕ ಎ. ಎಸ್. ಪೊನ್ನಣ್ಣ ಹೇಳಿದರು.
ಮಡಿಕೇರಿಯಲ್ಲಿ ನಡೆದ ಸುದ್ದಿ ಗೋಷ್ಟಿಯಲ್ಲಿ ಮಾಹಿತಿ ನೀಡಿದ ಶಾಸಕ ಪೊನ್ನಣ್ಣ ಅವರು, ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ ತಾಲೂಕು ವ್ಯಾಪ್ತಿಯಲ್ಲಿ ನಿವೇಶನ ರಹಿತ ಆದಿವಾಸಿಗಳನ್ನು ಸಮೀಕ್ಷೆ ಮೂಲಕ ಗುರುತಿಸಲಾಗಿದ್ದು ಸುಮಾರು 60 ಎಕ್ರೆ ಸಕಾ೯ರಿ ಜಾಗದಲ್ಲಿ ನಿವೇಶನ ರಹಿತ ಆದಿವಾಸಿಗಳಿಗೆ ನಿವೇಶನದ ಹಕ್ಕು ಪತ್ರ ನೀಡಿಕೆಗೆ ನಿಧಾ೯ರ ಮಾಡಲಾಗಿದೆ.
ಮುಂದಿನ ದಿನಗಳಲ್ಲಿ ಸಿಕ್ಕಸಿಕ್ಕಲ್ಲಿ ಶೆಡ್ ನಿಮಿ೯ಸಿ ಮನೆ ನಿರ್ಮಿಸಬೇಡಿ ಎಂದು ಪೊನ್ನಣ್ಣ ಮನವಿ ಮಾಡಿದರು.
ನಾಡಿನಲ್ಲಿ ಕೖಷಿ ಜಮೀನು ನಾಶ ಪಡಿಸುತ್ತಿರುವ ಆನೆಗಳನ್ನು ಕಾಡಿಗಟ್ಟಲು ಮಹತ್ವದ ಕ್ರಮಕ್ಕೆ ಅರಣ್ಯ ಇಲಾಖೆ ಮುಂದಾಗಿದ್ದು,ಈಗಾಗಲೇ 4 ಹುಲಿಗಳನ್ನು ಸೆರೆ ಹಿಡಿಯಲು ಸಕಾ೯ರ ಅನುಮತಿ ನೀಡಿದೆ.
ಹೀಗಿದ್ದರೂ ಹುಲಿಗಳನ್ನು ಗುರುತಿಸಿ ಸೆರೆಹಿಡಿಯಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಹುಲಿ ಸೆರೆಗೆ ಆದೇಶ ನೀಡಲಾಗಿದೆ. ಗುರುವಾರ ಅರಣ್ಯ ಇಲಾಖೆಯ ಅಧಿಕಾರಿ ವಗ೯ದೊಂದಿಗೆ ಮಹತ್ವದ ಸಭೆ ನಡೆಸಿ ವಿರಾಜಪೇಟೆ ಕ್ಷೇತ್ರದಲ್ಲಿ ಆನೆ, ಹುಲಿ ದಾಂಧಲೆಗೆ ಶಾಶ್ವತ ಕಡಿವಾಣ ಹಾಕುವ ನಿಟ್ಟಿನಲ್ಲಿ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತೀರ ಧಮ೯ಜ ಉತ್ತಪ್ಪ, ಜಿಪಂ ಮಾಜಿ ಅಧ್ಯಕ್ಷ ಪಿ.ಕೆ. ಪೊನ್ನಪ್ಪ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು