3:19 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು: ಶಾಸಕ ಪೊನ್ನಣ್ಣ

11/07/2025, 17:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಮುಂದಿನ 3 ತಿಂಗಳಲ್ಲಿ ಜಿಲ್ಲೆಯ ಅದಿವಾಸಿಗಳಿಗೆ ಮುಖ್ಮಮಂತ್ರಿಗಳಿಂದ ಹಕ್ಕು ಪತ್ರ ವಿತರಣೆಯ ಮಹತ್ವದ ತೀಮಾ೯ನ ಕೈ ಗೊಳ್ಳಲಾಗಿದೆ.
ಎಂದು ಶಾಸಕ ಎ. ಎಸ್. ಪೊನ್ನಣ್ಣ ಹೇಳಿದರು.
ಮಡಿಕೇರಿಯಲ್ಲಿ ನಡೆದ ಸುದ್ದಿ ಗೋಷ್ಟಿಯಲ್ಲಿ ಮಾಹಿತಿ ನೀಡಿದ ಶಾಸಕ ಪೊನ್ನಣ್ಣ ಅವರು, ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ ತಾಲೂಕು ವ್ಯಾಪ್ತಿಯಲ್ಲಿ ನಿವೇಶನ ರಹಿತ ಆದಿವಾಸಿಗಳನ್ನು ಸಮೀಕ್ಷೆ ಮೂಲಕ ಗುರುತಿಸಲಾಗಿದ್ದು ಸುಮಾರು 60 ಎಕ್ರೆ ಸಕಾ೯ರಿ ಜಾಗದಲ್ಲಿ ನಿವೇಶನ ರಹಿತ ಆದಿವಾಸಿಗಳಿಗೆ ನಿವೇಶನದ ಹಕ್ಕು ಪತ್ರ ನೀಡಿಕೆಗೆ ನಿಧಾ೯ರ ಮಾಡಲಾಗಿದೆ.
ಮುಂದಿನ ದಿನಗಳಲ್ಲಿ ಸಿಕ್ಕಸಿಕ್ಕಲ್ಲಿ ಶೆಡ್ ನಿಮಿ೯ಸಿ ಮನೆ ನಿರ್ಮಿಸಬೇಡಿ ಎಂದು ಪೊನ್ನಣ್ಣ ಮನವಿ ಮಾಡಿದರು.
ನಾಡಿನಲ್ಲಿ ಕೖಷಿ ಜಮೀನು ನಾಶ ಪಡಿಸುತ್ತಿರುವ ಆನೆಗಳನ್ನು ಕಾಡಿಗಟ್ಟಲು ಮಹತ್ವದ ಕ್ರಮಕ್ಕೆ ಅರಣ್ಯ ಇಲಾಖೆ ಮುಂದಾಗಿದ್ದು,ಈಗಾಗಲೇ 4 ಹುಲಿಗಳನ್ನು ಸೆರೆ ಹಿಡಿಯಲು ಸಕಾ೯ರ ಅನುಮತಿ ನೀಡಿದೆ.
ಹೀಗಿದ್ದರೂ ಹುಲಿಗಳನ್ನು ಗುರುತಿಸಿ ಸೆರೆಹಿಡಿಯಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಹುಲಿ ಸೆರೆಗೆ ಆದೇಶ ನೀಡಲಾಗಿದೆ. ಗುರುವಾರ ಅರಣ್ಯ ಇಲಾಖೆಯ ಅಧಿಕಾರಿ ವಗ೯ದೊಂದಿಗೆ ಮಹತ್ವದ ಸಭೆ ನಡೆಸಿ ವಿರಾಜಪೇಟೆ ಕ್ಷೇತ್ರದಲ್ಲಿ ಆನೆ, ಹುಲಿ ದಾಂಧಲೆಗೆ ಶಾಶ್ವತ ಕಡಿವಾಣ ಹಾಕುವ ನಿಟ್ಟಿನಲ್ಲಿ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತೀರ ಧಮ೯ಜ ಉತ್ತಪ್ಪ, ಜಿಪಂ ಮಾಜಿ ಅಧ್ಯಕ್ಷ ಪಿ.ಕೆ. ಪೊನ್ನಪ್ಪ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು