ಇತ್ತೀಚಿನ ಸುದ್ದಿ
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು ಹುಲಿ
11/02/2026, 20:50
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ದಕ್ಷಿಣ ಕೊಡಗಿನಲ್ಲಿ ನಿರಂತರ ಜಾನುವಾರುಗಳ ಮೇಲೆ ದಾಳಿಯಿಂದ ಆತಂಕದ ವಾತಾವರಣ ಸೃಷ್ಟಿಸಿದ್ದ ವ್ಯಾಘ್ರ ಕಡೆಗೂ ಸೆರೆಯಾಗಿದೆ.
ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಡಿ. ಎಫ್.ಓ ಜಗನಾಥ್, ಎಸಿಎಫ್ ಗೋಪಾಲ್ ನೇತೃತ್ವದಲ್ಲಿ 80 ಮಂದಿ ಅರಣ್ಯ ಸಿಬ್ಬಂದಿ ಹಾಗೂ ಎರಡು ಸಾಕಾನೆಗಳನ್ನು ಬಳಸಿ ಕಾರ್ಯಾಚರಣೆ ನಡೆಸಲಾಗಿದ್ದು, 6 ವರ್ಷ ಪ್ರಾಯದ ಗಂಡು ಹುಲಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.






ಕಳೆದ 10 ದಿನಗಳಿಂದ ಹುಲಿ ದಾಳಿಯಿಂದ 7 ಜಾನುವಾರುಗಳು ಬಲಿಯಾಗಿದ್ದು ಸ್ಥಳೀಯ ಬೆಳೆಗಾರರು ಮತ್ತು ರಾಜ್ಯ ರೈತ ಸಂಘದಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ಹುಲಿಯನ್ನು ಸುರಕ್ಷಿತವಾಗಿ ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.












