9:20 PM Sunday19 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ

16/10/2025, 14:10

ಮಂಗಳೂರು(reporterkarnataka.com): ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ(65) ಅವರು ಅರಶಿಣಮಕ್ಕಿಯ ಮನೆಯಲ್ಲಿ ವಿಧಿವಶರಾಗಿದ್ದಾರೆ.
ಯಕ್ಷಗಾನದ ಅಗ್ರಮಾನ್ಯ ಭಾಗವತರಲ್ಲಿ ಅವರು ಒಬ್ಬರಾಗಿದ್ದರು. ತನ್ನ ಕಂಠಸಿರಿಯಿಂದ ಅಪಾರ ಅಭಿಮಾನಿಗಳ ಮನಸ್ಸಿನಲ್ಲಿ ಮನೆಮಾಡಿದ ಅವರು ಭ್ರಾಮರೀ ಯಕ್ಷವೈಭವದ ಹಲವಾರು ಯಕ್ಷಗಾನಕ್ಕೆ ಭಾಗವತಿಕೆ ಮಾಡಿ ಆ ಪ್ರಸಂಗದ ಯಶಸ್ವಿಗೆ ಕಾರಣಕರ್ತರಾಗಿದ್ದರು. ರಸರಾಗ ಚಕ್ರವರ್ತಿ, ಗಾನಕೋಗಿಲೆ ಎಂದೇ ದಿನೇಶ್ ಅಮ್ಮಣ್ಣಾಯ ಪ್ರಸಿದ್ದರಾಗಿದ್ದರು.
ಪ್ರಸಿದ್ಧ ಭಾಗವತರಾದ ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿದ್ದರು. ನಾಲ್ಕು ದಶಕಕ್ಕೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಕಲಾ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಮೇಳದಲ್ಲಿ ದಿಗ್ಗಜ ಕಲಾವಿದರನ್ನು ರಂಗದಲ್ಲಿ ಕುಣಿಸಿದ ಕೀರ್ತಿ ಅಮ್ಮಣ್ಣಾಯರದ್ದು ಆಗಿದೆ. ತುಳು ಪ್ರಸಂಗಗಳಿಗೆ ತನ್ನ ಕಂಠ ಮಾಧುರ್ಯದಿಂದ ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು. ಅತ್ಯದ್ಭುತ ರಾಗ ಸಂಚಾರದ ಮೂಲಕ ಕರುಣಾ ರಸದ ಪದ್ಯಗಳಿಗೆ ಸಾಟಿಯಿಲ್ಲದ ಭಾಗವತ ಎನಿಸಿಕೊಂಡಿದ್ದರು. ಎಡನೀರು ಮೇಳದಲ್ಲೂ ತಿರುಗಾಟ ನಡೆಸಿದ್ದರು. ವಿಶ್ರಾಂತ ಜೀವನ ನಡೆಸುತ್ತಿದ್ದ ಅಮ್ಮಣ್ಣಾಯರು ಭಾಗವತರಾಗಿ ಅನೇಕ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಅಮ್ಮಣ್ಣಾಯರ ಅಗಲುವಿಕೆಗೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು