10:46 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ

16/10/2025, 14:10

ಮಂಗಳೂರು(reporterkarnataka.com): ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ(65) ಅವರು ಅರಶಿಣಮಕ್ಕಿಯ ಮನೆಯಲ್ಲಿ ವಿಧಿವಶರಾಗಿದ್ದಾರೆ.
ಯಕ್ಷಗಾನದ ಅಗ್ರಮಾನ್ಯ ಭಾಗವತರಲ್ಲಿ ಅವರು ಒಬ್ಬರಾಗಿದ್ದರು. ತನ್ನ ಕಂಠಸಿರಿಯಿಂದ ಅಪಾರ ಅಭಿಮಾನಿಗಳ ಮನಸ್ಸಿನಲ್ಲಿ ಮನೆಮಾಡಿದ ಅವರು ಭ್ರಾಮರೀ ಯಕ್ಷವೈಭವದ ಹಲವಾರು ಯಕ್ಷಗಾನಕ್ಕೆ ಭಾಗವತಿಕೆ ಮಾಡಿ ಆ ಪ್ರಸಂಗದ ಯಶಸ್ವಿಗೆ ಕಾರಣಕರ್ತರಾಗಿದ್ದರು. ರಸರಾಗ ಚಕ್ರವರ್ತಿ, ಗಾನಕೋಗಿಲೆ ಎಂದೇ ದಿನೇಶ್ ಅಮ್ಮಣ್ಣಾಯ ಪ್ರಸಿದ್ದರಾಗಿದ್ದರು.
ಪ್ರಸಿದ್ಧ ಭಾಗವತರಾದ ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿದ್ದರು. ನಾಲ್ಕು ದಶಕಕ್ಕೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಕಲಾ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಮೇಳದಲ್ಲಿ ದಿಗ್ಗಜ ಕಲಾವಿದರನ್ನು ರಂಗದಲ್ಲಿ ಕುಣಿಸಿದ ಕೀರ್ತಿ ಅಮ್ಮಣ್ಣಾಯರದ್ದು ಆಗಿದೆ. ತುಳು ಪ್ರಸಂಗಗಳಿಗೆ ತನ್ನ ಕಂಠ ಮಾಧುರ್ಯದಿಂದ ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು. ಅತ್ಯದ್ಭುತ ರಾಗ ಸಂಚಾರದ ಮೂಲಕ ಕರುಣಾ ರಸದ ಪದ್ಯಗಳಿಗೆ ಸಾಟಿಯಿಲ್ಲದ ಭಾಗವತ ಎನಿಸಿಕೊಂಡಿದ್ದರು. ಎಡನೀರು ಮೇಳದಲ್ಲೂ ತಿರುಗಾಟ ನಡೆಸಿದ್ದರು. ವಿಶ್ರಾಂತ ಜೀವನ ನಡೆಸುತ್ತಿದ್ದ ಅಮ್ಮಣ್ಣಾಯರು ಭಾಗವತರಾಗಿ ಅನೇಕ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಅಮ್ಮಣ್ಣಾಯರ ಅಗಲುವಿಕೆಗೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು