6:38 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

ಇತ್ತೀಚಿನ ಸುದ್ದಿ

ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ

16/10/2025, 14:10

ಮಂಗಳೂರು(reporterkarnataka.com): ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ(65) ಅವರು ಅರಶಿಣಮಕ್ಕಿಯ ಮನೆಯಲ್ಲಿ ವಿಧಿವಶರಾಗಿದ್ದಾರೆ.
ಯಕ್ಷಗಾನದ ಅಗ್ರಮಾನ್ಯ ಭಾಗವತರಲ್ಲಿ ಅವರು ಒಬ್ಬರಾಗಿದ್ದರು. ತನ್ನ ಕಂಠಸಿರಿಯಿಂದ ಅಪಾರ ಅಭಿಮಾನಿಗಳ ಮನಸ್ಸಿನಲ್ಲಿ ಮನೆಮಾಡಿದ ಅವರು ಭ್ರಾಮರೀ ಯಕ್ಷವೈಭವದ ಹಲವಾರು ಯಕ್ಷಗಾನಕ್ಕೆ ಭಾಗವತಿಕೆ ಮಾಡಿ ಆ ಪ್ರಸಂಗದ ಯಶಸ್ವಿಗೆ ಕಾರಣಕರ್ತರಾಗಿದ್ದರು. ರಸರಾಗ ಚಕ್ರವರ್ತಿ, ಗಾನಕೋಗಿಲೆ ಎಂದೇ ದಿನೇಶ್ ಅಮ್ಮಣ್ಣಾಯ ಪ್ರಸಿದ್ದರಾಗಿದ್ದರು.
ಪ್ರಸಿದ್ಧ ಭಾಗವತರಾದ ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿದ್ದರು. ನಾಲ್ಕು ದಶಕಕ್ಕೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಕಲಾ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಮೇಳದಲ್ಲಿ ದಿಗ್ಗಜ ಕಲಾವಿದರನ್ನು ರಂಗದಲ್ಲಿ ಕುಣಿಸಿದ ಕೀರ್ತಿ ಅಮ್ಮಣ್ಣಾಯರದ್ದು ಆಗಿದೆ. ತುಳು ಪ್ರಸಂಗಗಳಿಗೆ ತನ್ನ ಕಂಠ ಮಾಧುರ್ಯದಿಂದ ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು. ಅತ್ಯದ್ಭುತ ರಾಗ ಸಂಚಾರದ ಮೂಲಕ ಕರುಣಾ ರಸದ ಪದ್ಯಗಳಿಗೆ ಸಾಟಿಯಿಲ್ಲದ ಭಾಗವತ ಎನಿಸಿಕೊಂಡಿದ್ದರು. ಎಡನೀರು ಮೇಳದಲ್ಲೂ ತಿರುಗಾಟ ನಡೆಸಿದ್ದರು. ವಿಶ್ರಾಂತ ಜೀವನ ನಡೆಸುತ್ತಿದ್ದ ಅಮ್ಮಣ್ಣಾಯರು ಭಾಗವತರಾಗಿ ಅನೇಕ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಅಮ್ಮಣ್ಣಾಯರ ಅಗಲುವಿಕೆಗೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು