1:19 PM Sunday7 - June 2026
ಬ್ರೇಕಿಂಗ್ ನ್ಯೂಸ್
Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ ಸೊತ್ತು ವಶ; ಇಬ್ಬರ ಬಂಧನ

07/06/2026, 13:15

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಣ್ಣುವಳ್ಳಿ ಗ್ರಾಮದ ಫಾರಂ ಹೌಸ್ ನಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಭೇದಿಸಿದ ಆಗುಂಬೆ ಪೊಲೀಸರು 1 ಲಕ್ಷಕ್ಕೂ ಹೆಚ್ಚಿನ ಮಾಲಿನ ಸಮೇತ ಇಬ್ಬರನ್ನು ಬಂಧಿಸಿದ್ದಾರೆ.
ದಿನಾಂಕ 2-06-2026 ರಂದು ಕಳ್ಳತನ ಪ್ರಕರಣವನ್ನು ಬೇಧಿಸಲು ಹೊರಟ ಆಗುಂಬೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶಿವನಗೌಡ ಪಾಟೀಲ್ ನೇತೃತ್ವದ ತಂಡ 7 ಮೊಬೈಲ್ ಫೋನ್‌ಗಳು ಅಂದಾಜು ಮೌಲ್ಯ 1,41,000/- ರೂ ಗಳು ಹಾಗೂ ಕೃತ್ಯಕ್ಕೆ ಬಳಸಿದ ಕೆಎ 14 ಇಡಿ 7699 ಕಪ್ಪು ಬಣ್ಣದ ಪಲ್ಸರ್ ಬೈಕ್ ಅಂದಾಜು ಮೌಲ್ಯ -30,000/- ರೂ ಗಳು ಸೇರಿ ಒಟ್ಟು 1 ಲಕ್ಷದ 71 ಸಾವಿರ ರೂ ಗಳ ಮಾಲು ಹಾಗೂ ಇಬ್ಬರನ್ನು ತಮ್ಮ ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ಆರೋಪಿಗಳಾದ ಭದ್ರಾವತಿ ತಾಲೂಕಿನ ಹೊಸಮನೆಯ 34 ವರ್ಷದ ಬಾಲರಾಜ್@ ಕಿರಣ ಬಿನ್ ಜಾನ್
ಹಾಗೂ 20 ವರ್ಷದ ಹರ್ಷ ಬಿನ್ ಮಂಜ ಇಬ್ಬರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಆಗುಂಬೆ ಪೋಲೀಸರ ಈ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು