10:04 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಕಾಲೇಜುಗಳಲ್ಲಿ ಚುನಾವಣೆ ನಡೆಸುವ ಉದ್ದೇಶ ಇದೆ: ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌

02/01/2026, 21:20

ಬೆಂಗಳೂರು(reporterkarnataka.com): ನಾಯಕತ್ವ ಎನ್ನುವುದು ವಿದ್ಯಾರ್ಥಿ ದಿಸೆಯಿಂದಲೇ ಆರಂಭವಾಗುತ್ತದೆ. ಅನೇಕ ನಾಯಕರು ಕಾಲೇಜು ಹಂತದಿಂದಲೇ ಬೆಳದುಬಂದಿದ್ದಾರೆ. ಈ ನಿಟ್ಟಿನಲ್ಲಿ ಕಾಲೇಜು ಹಂತದಲ್ಲಿ ಚುನಾವಣೆ ಮಾಡುವ ಇಚ್ಛೆ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಕಾರ್ಯಕ್ರಮ ಒಂದರಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಮಿತಿಯ ಸಂಚಾಲಕರೂ ಆಗಿರುವ ಸಚಿವ ಡಾ. ಪಾಟೀಲ್‌, ಜನವರಿ 13ಕ್ಕೆ ಈ ಸಮಿತಿಯ ಮೊದಲ ಸಭೆ ಮಾಡಲಿದ್ದೇವೆ ಎಂದರು.
ಕಾಲೇಜುಗಳಲ್ಲಿ ಚುನಾವಣೆ ನಡೆಸುವ ಸಂಬಂಧ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಇತ್ತೀಚೆಗೆ ಸಮಿತಿ ರಚಿಸಿ, ಡಾ. ಶರಣಪ್ರಕಾಶ್‌ ಪಾಟೀಲ್‌ ಅವರನ್ನು ಸಂಚಾಲಕರನ್ನಾಗಿ ನೇಮಿಸಿದ್ದಾರೆ. ಚುನಾವಣೆ ರೂಪುರೇಷೆ ಕುರಿತು ಸಭೆಯಲ್ಲಿ ಚರ್ಚಿಸುತ್ತೇವೆ. ಸಮಿತಿ ಸಭೆಯಲ್ಲಿ ನಿರ್ಧರಿಸಿದ ವಿಷಯಗಳ ಕುರಿತು ವರದಿ ಮಾಡಿ ಕೆಪಿಸಿಸಿ ಅಧ್ಯಕ್ಷರಿಗೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷರು ನೇಮಿಸಿರುವ ಸಮಿತಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮುಖ್ಯ ಸಚೇತಕ ಸಲೀಂ ಅಹಮದ್‌, ಶಾಸಕರಾದ ರಿಜ್ವಾನ್‌ ಅರ್ಷದ್‌, ಬಿ. ಶಿವಣ್ಣ, ವಿಧಾನ ಪರಿಷತ್‌ ಸದಸ್ಯರಾದ ಪುಟ್ಟಣ್ಣ, ಬಸವನಗೌಡ ಬಾದರ್ಲಿ ಹಾಗೂ ಎಚ್‌.ಎಸ್. ಮಂಜುನಾಥ್‌ ಗೌಡ, ಕೀರ್ತಿ ಗಣೇಶ್‌ ಈ ಸಮಿತಿಯಲ್ಲಿ ಇದ್ದಾರೆ.

*ಕಾಲೇಜುಗಳಲ್ಲಿ ಋತುಚಕ್ರ ರಜೆ-ಸಿಎಂ ಆದೇಶ ಅಂತಿಮ*
ಕಾಲೇಜು ವಿದ್ಯಾರ್ಥಿನಿಯಯರು, ವಿವಿ ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ಕೊಡುವ ಬಗ್ಗೆ ಸಿಎಂ ಸೂಚನೆ ಕೊಟ್ಟರೆ ಮಾಡುತ್ತೇವೆ. ಸಿಎಂ ಆದೇಶವೇ ಅಂತಿಮ ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.
ಎಂಜಿನಿಯರ್ ಮತ್ತು ಮೆಡಿಕಲ್ ಸೀಟು ಶುಲ್ಕ ಹೆಚ್ಚಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲಎಂದು ಡಾ. ಪಾಟೀಲ್‌ ಸ್ಪಷ್ಟಪಡಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು