9:00 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಖಾಸಗಿ ಶಾಲಾ ವಾಹನ ಚಾಲಕರ ದರ್ಬಾರ್: ಅತೀ ವೇಗ ಪ್ರಶ್ನಿಸಿದರೆ ಗಲಾಟೆಗೆ ಬರುವ ಚಾಲಕರು!

02/07/2025, 23:17

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಖಾಸಗಿ ಶಾಲಾ ವಾಹನಗಳು ಅತ್ಯಂತ ವೇಗವಾಗಿ ಚಲಾಯಿಸುತ್ತಿದ್ದು ಅದನ್ನು ಪ್ರೆಶ್ನೆ ಮಾಡಿದ ಸಾರ್ವಜನಿಕರ ವಿರುದ್ಧ ಗಲಾಟೆ ಮಾಡಲು ಚಾಲಕರು ಬರುತ್ತಾರೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಂದು ಅರಣ್ಯ ಇಲಾಖೆ ಸಮೀಪ ಖಾಸಗಿ ಶಾಲೆಯ ವಾಹನ ಚಾಲಕ ರಸ್ತೆಯ ಪಕ್ಕದಲ್ಲಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿ ಹಾಗೂ ಮಹಿಳೆಯೊಬ್ಬರಿಗೆ ತಾಗಿಸಿದ್ದಾನೆ. ನೋಡಿಕೊಂಡು ಹೋಗಬೇಕು. ಇದು ಶಾಲೆ ಆಗಿರುವುದರಿಂದ ಮಕ್ಕಳು ಓಡಾಡುತ್ತಿರುತ್ತಾರೆ. ಸ್ವಲ್ಪ ನಿಧಾನವಾಗಿ ಹೋಗಿ ಎಂದು ಹೇಳಿದ್ದಕ್ಕೆ ಅಲ್ಲಿದ್ದ ಜನರ ವಿರುದ್ಧ ಚಾಲಕ ಗಲಾಟೆ ಮಾಡಿದ್ದಾನೆ ಎಂದು ಅಲ್ಲಿದ್ದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಖಾಸಗಿ ಶಾಲಾ ವಾಹನಗಳು ಅತ್ಯಂತ ವೇಗವಾಗಿ ಹೋಗುತ್ತವೆ ಎಂಬುದಾಗಿ ವರದಿ ಕೂಡ ಮಾಡಿತ್ತು. ಆದರೆ ಈ ಬಗ್ಗೆ ಶಾಲಾ ಆಡಳಿತ ಮಂಡಳಿ ಹಾಗೂ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಂತೆ ಕಾಣಿಸುತ್ತಿಲ್ಲ. ಮಳೆಗಾಲದಲ್ಲಿ ಅತ್ಯಂತ ವೇಗವಾಗಿ ಹೋಗುವಾಗ ಗಾಡಿ ಸ್ಕಿಡ್ ಆಗುವ ಸಾಧ್ಯತೆ ಇರುತ್ತದೆ. ವಾಹನದಲ್ಲಿ ಮಕ್ಕಳು ಇರುತ್ತಾರೆ ಎಂಬುದನ್ನು ಚಾಲಕರು ಮರೆತಂತೆ ಕಾಣಿಸುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು