11:25 PM Wednesday2 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ಖಾಸಗಿ ಶಾಲಾ ವಾಹನ ಚಾಲಕರ ದರ್ಬಾರ್: ಅತೀ ವೇಗ ಪ್ರಶ್ನಿಸಿದರೆ ಗಲಾಟೆಗೆ ಬರುವ ಚಾಲಕರು!

02/07/2025, 23:17

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಖಾಸಗಿ ಶಾಲಾ ವಾಹನಗಳು ಅತ್ಯಂತ ವೇಗವಾಗಿ ಚಲಾಯಿಸುತ್ತಿದ್ದು ಅದನ್ನು ಪ್ರೆಶ್ನೆ ಮಾಡಿದ ಸಾರ್ವಜನಿಕರ ವಿರುದ್ಧ ಗಲಾಟೆ ಮಾಡಲು ಚಾಲಕರು ಬರುತ್ತಾರೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಂದು ಅರಣ್ಯ ಇಲಾಖೆ ಸಮೀಪ ಖಾಸಗಿ ಶಾಲೆಯ ವಾಹನ ಚಾಲಕ ರಸ್ತೆಯ ಪಕ್ಕದಲ್ಲಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿ ಹಾಗೂ ಮಹಿಳೆಯೊಬ್ಬರಿಗೆ ತಾಗಿಸಿದ್ದಾನೆ. ನೋಡಿಕೊಂಡು ಹೋಗಬೇಕು. ಇದು ಶಾಲೆ ಆಗಿರುವುದರಿಂದ ಮಕ್ಕಳು ಓಡಾಡುತ್ತಿರುತ್ತಾರೆ. ಸ್ವಲ್ಪ ನಿಧಾನವಾಗಿ ಹೋಗಿ ಎಂದು ಹೇಳಿದ್ದಕ್ಕೆ ಅಲ್ಲಿದ್ದ ಜನರ ವಿರುದ್ಧ ಚಾಲಕ ಗಲಾಟೆ ಮಾಡಿದ್ದಾನೆ ಎಂದು ಅಲ್ಲಿದ್ದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಖಾಸಗಿ ಶಾಲಾ ವಾಹನಗಳು ಅತ್ಯಂತ ವೇಗವಾಗಿ ಹೋಗುತ್ತವೆ ಎಂಬುದಾಗಿ ವರದಿ ಕೂಡ ಮಾಡಿತ್ತು. ಆದರೆ ಈ ಬಗ್ಗೆ ಶಾಲಾ ಆಡಳಿತ ಮಂಡಳಿ ಹಾಗೂ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಂತೆ ಕಾಣಿಸುತ್ತಿಲ್ಲ. ಮಳೆಗಾಲದಲ್ಲಿ ಅತ್ಯಂತ ವೇಗವಾಗಿ ಹೋಗುವಾಗ ಗಾಡಿ ಸ್ಕಿಡ್ ಆಗುವ ಸಾಧ್ಯತೆ ಇರುತ್ತದೆ. ವಾಹನದಲ್ಲಿ ಮಕ್ಕಳು ಇರುತ್ತಾರೆ ಎಂಬುದನ್ನು ಚಾಲಕರು ಮರೆತಂತೆ ಕಾಣಿಸುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು