9:13 PM Friday17 - April 2026
ಬ್ರೇಕಿಂಗ್ ನ್ಯೂಸ್
ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ… ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ | ಒನ್ ವೇ ರಸ್ತೆಯಲ್ಲಿ ಬಂದ, ಪೊಲೀಸರು ಆಕ್ಷೇಪಿಸಿದಕ್ಕೆ ದೇವಸ್ಥಾನದಲ್ಲಿ ಹುಯ್ಲು ಕೊಡ್ತೀನಿ ಅಂದ!

17/04/2026, 20:53

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪೊಲೀಸರ ಕೆಲಸಗಳು ಎಷ್ಟೊಂದು ಕಷ್ಟ ಎನ್ನುವುದಕ್ಕೆ ವಿಚಿತ್ರ ಪ್ರಸಂಗವೊಂದು ನಡೆದಿದ್ದು ಪೊಲೀಸರ ವಿರುದ್ಧದ ದೇವಸ್ಥಾನದಲ್ಲಿ ಹೊಯ್ಲು ಕೊಡಲು ಹೋದಂತಹ ವಿಚಿತ್ರ ಘಟನೆಗೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಗಾಂಧಿ ಚೌಕದಿಂದ ಮಾರಿಕಾಂಬಾ ದೇವಸ್ಥಾನದ ರಸ್ತೆ, ಒನ್ ವೇ ರಸ್ತೆಯಾಗಿದ್ದು ಈ ರಸ್ತೆಯಲ್ಲಿ ಬಂದಂತಹ ವ್ಯಕ್ತಿಯೊಬ್ಬನನ್ನ ಪೊಲೀಸರು ತಡೆದಿದ್ದಾರೆ. ಅಷ್ಟೇ ಅಲ್ಲದೆ ಆತ ಹೆಲ್ಮೆಟ್ ಸಹ ಹಾಕಿರಲಿಲ್ಲ. ಇದನ್ನು ಪ್ರಶ್ನೆ ಮಾಡಿದ ಪೊಲೀಸರಿಗೆ ಆತ ಹೇಳಿದಂತಹ ಮಾತು ನಿಜಕ್ಕೂ ಶಾಕ್ ಆಗಿದೆ. ಆತ ಏಕಾಏಕಿ ಮಾರಿಕಾಂಬ ದೇವಸ್ಥಾನದ ಮೆಟ್ಟಿಲನ್ನ ಹತ್ತಿ ನಾನು ದೇವಸ್ಥಾನದ ಕಾಣಿಕೆ ಹುಂಡಿಗೆ ಕಾಣಿಕೆ ಹಾಕಿ ನಿಮ್ಮ ಮೇಲೆ ಹುಯ್ಲು ಕೊಡ್ತೀನಿ ಎಂದು ಹೇಳಿದ್ದಾನೆ.
ಆ ವ್ಯಕ್ತಿಯ ಮಾತನ್ನು ಕೇಳಿದ ಪೊಲೀಸರು ಒಂದು ಕ್ಷಣಕ್ಕೆ ದಿಗ್ಭ್ರಮೆಗೊಂಡಿದ್ದಾರೆ. ಸಾರ್ವಜನಿಕರಿಗೆ ಒಳ್ಳೆಯದನ್ನು ಹೇಳಿದರು ಅರ್ಥ ಮಾಡಿಕೊಳ್ಳುವುದಿಲ್ಲ ಎಂಬುದಕ್ಕೆ ಇದೊಂದು ನಿದರ್ಶನ ಆಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು