11:50 AM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ | ಮಾಜಿ ಗೃಹ ಸಚಿವರ ತವರಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮರಳು ದಂಧೆ!!: ಅಧಿಕಾರಿಗಳು ಮೌನಕ್ಕೆ ಶರಣು!

27/10/2025, 13:17

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.karnataka@gmail.com

ತೀರ್ಥಹಳ್ಳಿಯಲ್ಲಿ ಎಗ್ಗಿಲ್ಲದೇ ಮರಳು ದಂಧೆ ನಡೆಯುತ್ತಿದ್ದು,
ಗಣಿ ಮತ್ತು ಭೂ ವಿಜ್ಞಾನ, ಕಂದಾಯ, ಅರಣ್ಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ.
ಹರಿಯುವ ನದಿ ನೀರಿನಲ್ಲಿಯೇ ಮರಳು ದಂಧೆ ಅವ್ಯಾಹತವಾಗಿ ಸಾಗುತ್ತಿದೆ. ಇವೆಲ್ಲದರ ಮಧ್ಯೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಕಣ್ಣು ಮುಚ್ಚಿ ಕತ್ತಲು ಮಾಡಿಕೊಳ್ಳುತ್ತಿದ್ದಾರೆ.


ಅಧಿಕಾರಿಗಳು ಎಷ್ಟು ಜಾಣ ನಿದ್ದೆಯಲ್ಲಿ ಇದ್ದಾರೆ ಎಂಬುದಕ್ಕೆ ಮರಳು ದಂಧೆಯೇ ಸಾಕ್ಷಿಯಾಗಿದೆ.
ಹಗಲಿನ ವೇಳೆಯಲ್ಲಿಯೇ ಮರಳನ್ನು ನೇರವಾಗಿ ಜೆಸಿಬಿ‌ ಮೂಲಕ ದಂಧೆಕೋರರು ಎತ್ತುತ್ತಿದ್ದಾರೆ. ಆರಗ ಸಮೀಪದ ಸಂಕದಹೊಳೆಯ ಗೋಪಿನಾಥ ಹಳ್ಳದಿಂದ ಮರಳು ಸಾಗಾಟ ನಡೆಯುತ್ತಿದೆ. ಶಾಸಕ ಆರಗ ಜ್ಞಾನೇಂದ್ರರ ಊರಲ್ಲೇ ನಡೆಯುತ್ತಿದೆ ಮರಳು ಮಾಫಿಯ..! ಮರಳು ದಂಧೆ ಬಗ್ಗೆ ಗೊತ್ತಿದ್ದರೂ ಶಾಸಕರು ಮೌನವಾಗಿದ್ದಾರೆ. ಜಣ ಜಣ ಕಾಂಚಾಣದ ಕೆಲಸ ನಡೆಯುತ್ತಿರುವ ಶಂಕೆ ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು