3:58 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಮಸೀದಿ ಬಳಿ ನಿಲ್ಲಿಸಿದ್ದ ವಾಹನ ಅಪಹರಿಸಿದ ಖದೀಮರು; 30 ಲಕ್ಷ ರೂ. ಕಳ್ಳತನ?

14/03/2025, 22:35

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಶಿವಮೊಗ್ಗದಿಂದ ಮಂಗಳೂರಿಗೆ ಗುಜರಿ ಸಾಮಾನುಗಳನ್ನು ತರಲು ಹೋಗುತ್ತಿದ್ದ ವಾಹನವೊಂದನ್ನು ಅಪಹರಿಸಿ ಬೇರೆಡೆ ನಿಲ್ಲಿಸಿ ಹೋಗಿರುವ ಘಟನೆ ನಡೆದರೆ, ಆ ವಾಹನದಲ್ಲಿದ್ದ ಹಣದ ಮೌಲ್ಯವನ್ನು ಕೇಳಿ ಒಮ್ಮೆಲೇ ಎಲ್ಲರೂ ಬೆಚ್ಚಿ ಬೀಳುವ ಘಟನೆ ರಂಜದಕಟ್ಟೆಯಲ್ಲಿ ಶುಕ್ರವಾರ ನಡೆದಿದೆ.
ಮುಳಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ರಂಜದಕಟ್ಟೆಯ ಮಸೀದಿ ಬಳಿ ಟಾಟಾ ಗುಡ್ಸ್ ವಾಹನವೊಂದನ್ನು ನಿಲ್ಲಿಸಿ ನಮಾಜ್ ಮಾಡಲು ಮಸೀದಿಗೆ ತೆರಳಿದ್ದರು. ಆ ವಾಹನದಲ್ಲಿ ಬರೋಬ್ಬರಿ 30 ಲಕ್ಷ ಹಣ ಇತ್ತು ಎಂದು ಹೇಳಲಾಗಿದ್ದು ಈಗ ಆ ಹಣವನ್ನು ಯಾರೋ ಅಪಹರಣ ಮಾಡಿದ್ದರು. ಮಸೀದಿ ಎದುರು ನಿಲ್ಲಿಸಿದ್ದ ವಾಹನವನ್ನೇ ಅಪಹರಿಸಿರುವ ಕಳ್ಳರು ನಂತರ ಆ ವಾಹನವನ್ನು ಕೂಗ್ ಅಳತೆ ದೂರದ
ಬಿಳುಕೊಪ್ಪ ಬಳಿ ವಾಹನ ನಿಲ್ಲಿಸಿ ಹಣವನ್ನು ಕದ್ದೊಯ್ದಿದ್ದಾರೆ.
ಅಷ್ಟೊಂದು ಹಣ ನಿಜವಾಗಿಯೂ ಇತ್ತಾ? ಅಷ್ಟಕ್ಕೂ ಅಷ್ಟೊಂದು ಹಣವನ್ನು ತೆಗೆದುಕೊಂಡು ಹೋಗುತ್ತಿದ್ದಿದ್ದು ಯಾಕೆ? ಎಂಬ ಪ್ರೆಶ್ನೆ ಒಂದೆಡೆ ಯಾದರೆ ಹಣ ಇದ್ದ ವಿಚಾರ ತಿಳಿದಂತವರೇ ಯಾರೋ ಈ ಕೆಲಸ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು