5:49 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಟಿಂಬರ್ ಲೋಡ್ ಮಾಡುವಾಗ ತಲೆ ಮೇಲೆ ಬಿದ್ದ ಮರದ ದಿಮ್ಮಿ ಬಿದ್ದು ವ್ಯಕ್ತಿ ಸಾವು

08/07/2025, 19:12

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಟಿಂಬರ್ ಲೋಡ್ ಕೆಲಸಕ್ಕೆಂದು ಹೋಗಿದ್ದ ವೇಳೆಯಲ್ಲಿ ಮರದ ದಿಮ್ಮಿಗಳನ್ನು ಮೇಲಿನಿಂದ ಕೆಳಗೆ ತಂದು ಹಾಕುತ್ತಿರುವಾಗ ಕಾಲು ಜಾರಿ ಬಿದ್ದ ಕಾರಣದಿಂದ ಮರದ ದಿಮ್ಮಿ ಮೈಮೇಲೆ ಮೇಲೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಸವಾನಿಯಲ್ಲಿ ನಡೆದಿದೆ.
ಯೋಗೇಂದ್ರ (52 ) ಮೃತಪಟ್ಟ ದುರ್ದೈವಿ. ದೇವಂಗಿ ಗ್ರಾಮದ ವ್ಯಕ್ತಿ ಯೊಬ್ಬರು ಟಿಂಬರ್ ಲೋಡ್ ಮಾಡಲು ಹೇಳಿದ್ದ ಕಾರಣದಿಂದ ಬಸವಾನಿ ಗ್ರಾಮದ ಜ್ಯೋತಿಸರ ಎಂಬಲ್ಲಿಗೆ ಯೋಗೇದ್ರ ಸೇರಿ ನಾಲ್ವರು ಕೆಲಸಕ್ಕಾಗಿ ಹೋಗಿದ್ದರು. ಈ ವೇಳೆ ಮರದ ದಿಮ್ಮಿಗಳನ್ನು ಮೇಲಿನಿಂದ ಕೆಳಗೆ ತಂದು ಹಾಕುತ್ತಿರುವಾಗ ಕಾಲು ಜಾರಿ ಬಿದ್ದು ಮರದ ದಿಮ್ಮಿ ಯೋಗೇಂದ್ರ ಎಂಬುವರ ತಲೆಗೆ ಹಾಗೂ ಮೂಗಿಗೆ ಬಲವಾಗಿ ಬಡಿದು ರಕ್ತ ಸ್ರಾವವಾಗಿರುತ್ತದೆ.
ತಕ್ಷಣವೇ ಅವರ ಸ್ನೇಹಿತರು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಆ ವೇಳೆಗೆ ಯೋಗೇದ್ರ ಎಂಬುವರು ಮೃತಪಟ್ಟಿರುತ್ತಾರೆ. ಕೂಲಿ ಕೆಲಸಕ್ಕೆಂದು ಪರಸ್ಥಳದಿಂದ ಕರೆಸಿ ಅತೀ ಭಾರವಾದಂತಹ ಮರದ ದಿಮ್ಮಿಗಳನ್ನು ಮೇಲಿನಿಂದ ತಂದು ಕೆಳಗೆ ಹಾಕಲು ಒತ್ತಾಯ ಪಡಿಸಿದ್ದು ಯಾವುದೇ ಮುಂಜಾಗ್ರತೆ ಕ್ರಮವನ್ನು ಕೆಲಸಗಾರರಿಗೆ ಕೆಲಸ ಮಾಡಲು ತೆಗೆದುಕೊಳ್ಳದೆ ನಿರ್ಲಕ್ಷ್ಯವಹಿಸಿ ನನ್ನ ತಮ್ಮ ಯೋಗೇಂದ್ರ ರವರ ಸಾವಿಗೆ ಕಾರಣನಾದ ಟಿಂಬರ್ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಯೋಗೇದ್ರ ಅವರ ಸಹೋದರ ದೂರು ನೀಡಿದ್ದಾರೆ.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕಾರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು