5:16 PM Thursday19 - February 2026
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ: ಅಸಾದಿ ಕೈ ಹಿಡಿದ ಅದೃಷ್ಟ; 2ನೇ ಭಾರಿ ಅಧ್ಯಕ್ಷರಾಗಿ ಆಯ್ಕೆ; ಜೋಡೆತ್ತುಗಳ ಕಾರುಬಾರು!

28/08/2024, 01:52

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ರಹಮತುಲ್ಲಾ ಅಸಾದಿ ಆಯ್ಕೆ ಆಗಿದ್ದಾರೆ. ಕುತೂಹಲ ಮೂಡಿಸಿದ್ದ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಅದೃಷ್ಟ ಅಸಾದಿ ಕೈ ಹಿಡಿದಿದೆ.
ಈ ಹಿಂದೆ ಬಿಜೆಪಿ ಪಕ್ಷದಿಂದ ಅಧ್ಯಕ್ಷರಾಗಿದ್ದ ಅಸಾದಿ ಕಳೆದ 20 ವರ್ಷಗಳಿಂದ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತ ಬಂದಿದ್ದಾರೆ. ಈಗ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ಪಟ್ಟಣ ಅಭಿವೃದ್ಧಿಯತ್ತ ಸಾಗುವ ನಿರೀಕ್ಷೆ ಪಟ್ಟಣದ ಸಾರ್ವಜನಿಕರಲ್ಲಿ ಮಾತು ಕೇಳಿ ಬರುತ್ತಿದೆ.
*ಅಧ್ಯಕ್ಷರು ಉಪಾಧ್ಯಕ್ಷರು ಬದಲಾವಣೆ:* ಈ ಹಿಂದಿನ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಗೀತಾ ರಮೇಶ್ ಈ ಅವಧಿಯಲ್ಲಿ ಉಪಾಧ್ಯಕ್ಷರಾದರೆ ಉಪಾಧ್ಯಕ್ಷರಾಗಿದ್ದ ರಹಮತುಲ್ಲಾ ಅಸಾದಿ ಅಧ್ಯಕ್ಷರಾಗಿ ಬದಲಾವಣೆ ಆಗಿದ್ದಾರೆ.
*ನಾಮಪತ್ರ ಸಲ್ಲಿಸಿದ್ದವರು ಯಾರು?* ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಸೊಪ್ಪುಗುಡ್ಡೆ ರಾಘವೇಂದ್ರ, ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ಗಣೇಶ್, ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ರಹಮತುಲ್ಲಾ ಅಸಾದಿ, ಉಪಾಧ್ಯಕ್ಷ ಸ್ಥಾನಕ್ಕೆ ಗೀತಾ ರಮೇಶ್ ನಾಮಪತ್ರ ಸಲ್ಲಿಸಿದ್ದರು.
ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಬಹುಮತ ಇದ್ದ ಕಾಂಗ್ರೆಸ್ ಒಂಬತ್ತು ಮತಗಳಿಂದ ಜಯಭೇರಿ ಭಾರಿಸಿದ್ದು
ಅದೃಷ್ಟ ಅಸಾದಿ ಕೈ ಹಿಡಿದಿದೆ.
*ಜೋಡೆತ್ತುಗಳ ದರ್ಬಾರ್!*
ಕಾಂಗ್ರೆಸ್ ಪಕ್ಷದ ಮುಖಂಡರಾದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಆರ್. ಎಂ. ಮಂಜುನಾಥ್ ಗೌಡರು ಪಟ್ಟಣ ಪಂಚಾಯಿತಿ ಸದಸ್ಯರಿಗೆ ವಿಪ್ ಜಾರಿ ಮಾಡಿ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಸಮೀಪದ ರೆಸಾರ್ಟ್ ಒಂದರಲ್ಲಿ ಎಲ್ಲರನ್ನು ಗೌಪ್ಯವಾಗಿ ಇಟ್ಟುಕೊಂಡು ಚುನಾವಣೆ ಗೆಲ್ಲುವ ಸಲುವಾಗಿ ರೆಸಾರ್ಟ್ ರಾಜಕೀಯಕ್ಕೆ ಹೋಗಿದ್ದರು. ಒಟ್ಟಿನಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಪಟ್ಟಣ ಪಂಚಾಯಿತಿ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಮತ್ತೊಮ್ಮೆ ಜೋಡೆತ್ತುಗಳ ಕೈ ಹಿಡಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು