9:28 PM Tuesday15 - July 2025
ಬ್ರೇಕಿಂಗ್ ನ್ಯೂಸ್
ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ…

ಇತ್ತೀಚಿನ ಸುದ್ದಿ

ತಿರುವೈಲೋತ್ಸವದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್: ತುಳುನಾಡಿನ ಕಂಬಳದಲ್ಲಿ ಅವರು ಮಾತನಾಡಿದ್ದು ಏನು?

17/02/2024, 21:07

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ನಮ್ಮ ಸಂಸ್ಕೃತಿ ನಮ್ಮ ದೇಶದ ಆಸ್ತಿ. ಈ ಆಸ್ತಿಯನ್ನು ಕಾಪಾಡಿಕೊಂಡು ಬಂದಿರುವ ನಿಮಗೆ ಈಶ್ವರ ಇನ್ನಷ್ಟು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಇದು ತುಳುನಾಡಿನ ಪವಿತ್ರವಾದ ಭೂಮಿ. ಸರ್ವಜನಾಂಗದ ಶಾಂತಿಯ ತೋಟವಾಗಿ ಈ ಭೂಮಿಗೆ ವಿಶೇಷ ಶಕ್ತಿ ಇದೆ. ಇದು ವಿದ್ಯಾ ಕ್ಷೇತ್ರ, ಆರ್ಥಿಕ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಎಲ್ಲಾ ರಂಗದಲ್ಲೂ ಉದ್ಯೋಗ ಸೃಷ್ಟಿಸುವ ಪವಿತ್ರ ಭೂಮಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.



ಅವರು ವಾಮಂಜೂರಿನ ತಿರುವೈಲ್ ಗುತ್ತಿನ ಸಂಕ ಪೂಂಜ- ದೇವು ಪೂಂಜ ಜೋಡುಕರೆ ಕಂಬಳದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಈ ಭೂಮಿಯಲ್ಲಿ ನಮ್ಮ ನಾಡಿನ ಕ್ರೀಡೆಗಳನ್ನು ಉಳಿಸಿಕೊಂಡು ಬೆಳೆಸಿಕೊಂಡು ಬರಲಾಗಿದೆ. ಈ ಭಾಷೆ, ಸಂಸ್ಕೃತಿ ರಾಜ್ಯಕ್ಕೆ ಮೆರುಗು ನೀಡಿದೆ. ನಾನು ಇಂದು ಕಂಬಳ ವೀಕ್ಷಣೆ ಮಾಡಿ, ಇದರ ಅಭಿಮಾನಗಳಿಗೆ, ಆಯೋಜಕರು, ಪ್ರೋತ್ಸಾಹ ನೀಡುವವರಿಗೆ ಶುಭ ಹಾರೈಸಿ ನಿಮ್ಮ ಜತೆ ಸರ್ಕಾರ ಇದೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ ಎಂದರು.
ಈ ವರ್ಷ ನಾನು ಉಪಮುಖ್ಯಮಂತ್ರಿಯಾಗಿ ಬೆಂಗಳೂರಿನ ಜವಾಬ್ದಾರಿ ವಹಿಸಿಕೊಂಡ ನಂತರ ಇದನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಈ ಪ್ರೋತ್ಸಾಹವನ್ನು ನಾವು ಸದಾ ಮುಂದುವರಿಸುತ್ತೇವೆ. ಈ ಕಂಬಳ ಕ್ರೀಡೆ ದೇಶಕ್ಕೆ ಹಿರಿಮೆಯಾಗಿದೆ. ವಿಶ್ವಮಟ್ಟದಲ್ಲಿ ಈ ಕ್ರೀಡೆ ಗುರುತಿಸಿಕೊಳ್ಳಬೇಕು ಎಂದು ನಾವು ಬಯಸುತ್ತಿದ್ದು, ಇದಕ್ಕೆ ಬೇಕಾದ ಎಲ್ಲಾ ಸಹಕಾರವನ್ನು ನೀಡಲು ನಾನು ಬದ್ಧ ಎಂದು ಡಿಸಿಎಂ ನುಡಿದರು.
ನಿಮ್ಮ ಸರ್ಕಾರ ನಿಮ್ಮ ಜತೆ ಇರಲಿದೆ. ಇದನ್ನು ಉಳಿಸಿ ಬೆಳೆಸಿ. ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಕೋರುತ್ತೇನೆ ಎಂದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ,ಇನಾಯತ್ ಅಲಿ, ಮಂಗಳೂರು ಮಹಾನಗರಪಾಲಿಕೆ ಪ್ರತಿಪಕ್ಷದ ನಾಯಕ,ತಿರುವೈಲುಗುತ್ತಿನ ಪ್ರವೀಣ್ ಚಂದ್ರ ಆಳ್ವ,ನವೀನ್ ಚಂದ್ರ ಆಳ್ವ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾಯೋಜನೆ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು