7:40 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ತಿರುವೈಲೋತ್ಸವದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್: ತುಳುನಾಡಿನ ಕಂಬಳದಲ್ಲಿ ಅವರು ಮಾತನಾಡಿದ್ದು ಏನು?

17/02/2024, 21:07

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ನಮ್ಮ ಸಂಸ್ಕೃತಿ ನಮ್ಮ ದೇಶದ ಆಸ್ತಿ. ಈ ಆಸ್ತಿಯನ್ನು ಕಾಪಾಡಿಕೊಂಡು ಬಂದಿರುವ ನಿಮಗೆ ಈಶ್ವರ ಇನ್ನಷ್ಟು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಇದು ತುಳುನಾಡಿನ ಪವಿತ್ರವಾದ ಭೂಮಿ. ಸರ್ವಜನಾಂಗದ ಶಾಂತಿಯ ತೋಟವಾಗಿ ಈ ಭೂಮಿಗೆ ವಿಶೇಷ ಶಕ್ತಿ ಇದೆ. ಇದು ವಿದ್ಯಾ ಕ್ಷೇತ್ರ, ಆರ್ಥಿಕ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಎಲ್ಲಾ ರಂಗದಲ್ಲೂ ಉದ್ಯೋಗ ಸೃಷ್ಟಿಸುವ ಪವಿತ್ರ ಭೂಮಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.



ಅವರು ವಾಮಂಜೂರಿನ ತಿರುವೈಲ್ ಗುತ್ತಿನ ಸಂಕ ಪೂಂಜ- ದೇವು ಪೂಂಜ ಜೋಡುಕರೆ ಕಂಬಳದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಈ ಭೂಮಿಯಲ್ಲಿ ನಮ್ಮ ನಾಡಿನ ಕ್ರೀಡೆಗಳನ್ನು ಉಳಿಸಿಕೊಂಡು ಬೆಳೆಸಿಕೊಂಡು ಬರಲಾಗಿದೆ. ಈ ಭಾಷೆ, ಸಂಸ್ಕೃತಿ ರಾಜ್ಯಕ್ಕೆ ಮೆರುಗು ನೀಡಿದೆ. ನಾನು ಇಂದು ಕಂಬಳ ವೀಕ್ಷಣೆ ಮಾಡಿ, ಇದರ ಅಭಿಮಾನಗಳಿಗೆ, ಆಯೋಜಕರು, ಪ್ರೋತ್ಸಾಹ ನೀಡುವವರಿಗೆ ಶುಭ ಹಾರೈಸಿ ನಿಮ್ಮ ಜತೆ ಸರ್ಕಾರ ಇದೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ ಎಂದರು.
ಈ ವರ್ಷ ನಾನು ಉಪಮುಖ್ಯಮಂತ್ರಿಯಾಗಿ ಬೆಂಗಳೂರಿನ ಜವಾಬ್ದಾರಿ ವಹಿಸಿಕೊಂಡ ನಂತರ ಇದನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಈ ಪ್ರೋತ್ಸಾಹವನ್ನು ನಾವು ಸದಾ ಮುಂದುವರಿಸುತ್ತೇವೆ. ಈ ಕಂಬಳ ಕ್ರೀಡೆ ದೇಶಕ್ಕೆ ಹಿರಿಮೆಯಾಗಿದೆ. ವಿಶ್ವಮಟ್ಟದಲ್ಲಿ ಈ ಕ್ರೀಡೆ ಗುರುತಿಸಿಕೊಳ್ಳಬೇಕು ಎಂದು ನಾವು ಬಯಸುತ್ತಿದ್ದು, ಇದಕ್ಕೆ ಬೇಕಾದ ಎಲ್ಲಾ ಸಹಕಾರವನ್ನು ನೀಡಲು ನಾನು ಬದ್ಧ ಎಂದು ಡಿಸಿಎಂ ನುಡಿದರು.
ನಿಮ್ಮ ಸರ್ಕಾರ ನಿಮ್ಮ ಜತೆ ಇರಲಿದೆ. ಇದನ್ನು ಉಳಿಸಿ ಬೆಳೆಸಿ. ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಕೋರುತ್ತೇನೆ ಎಂದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ,ಇನಾಯತ್ ಅಲಿ, ಮಂಗಳೂರು ಮಹಾನಗರಪಾಲಿಕೆ ಪ್ರತಿಪಕ್ಷದ ನಾಯಕ,ತಿರುವೈಲುಗುತ್ತಿನ ಪ್ರವೀಣ್ ಚಂದ್ರ ಆಳ್ವ,ನವೀನ್ ಚಂದ್ರ ಆಳ್ವ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾಯೋಜನೆ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು