5:09 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ತಿರುವೈಲೋತ್ಸವದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್: ತುಳುನಾಡಿನ ಕಂಬಳದಲ್ಲಿ ಅವರು ಮಾತನಾಡಿದ್ದು ಏನು?

17/02/2024, 21:07

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ನಮ್ಮ ಸಂಸ್ಕೃತಿ ನಮ್ಮ ದೇಶದ ಆಸ್ತಿ. ಈ ಆಸ್ತಿಯನ್ನು ಕಾಪಾಡಿಕೊಂಡು ಬಂದಿರುವ ನಿಮಗೆ ಈಶ್ವರ ಇನ್ನಷ್ಟು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಇದು ತುಳುನಾಡಿನ ಪವಿತ್ರವಾದ ಭೂಮಿ. ಸರ್ವಜನಾಂಗದ ಶಾಂತಿಯ ತೋಟವಾಗಿ ಈ ಭೂಮಿಗೆ ವಿಶೇಷ ಶಕ್ತಿ ಇದೆ. ಇದು ವಿದ್ಯಾ ಕ್ಷೇತ್ರ, ಆರ್ಥಿಕ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಎಲ್ಲಾ ರಂಗದಲ್ಲೂ ಉದ್ಯೋಗ ಸೃಷ್ಟಿಸುವ ಪವಿತ್ರ ಭೂಮಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.



ಅವರು ವಾಮಂಜೂರಿನ ತಿರುವೈಲ್ ಗುತ್ತಿನ ಸಂಕ ಪೂಂಜ- ದೇವು ಪೂಂಜ ಜೋಡುಕರೆ ಕಂಬಳದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಈ ಭೂಮಿಯಲ್ಲಿ ನಮ್ಮ ನಾಡಿನ ಕ್ರೀಡೆಗಳನ್ನು ಉಳಿಸಿಕೊಂಡು ಬೆಳೆಸಿಕೊಂಡು ಬರಲಾಗಿದೆ. ಈ ಭಾಷೆ, ಸಂಸ್ಕೃತಿ ರಾಜ್ಯಕ್ಕೆ ಮೆರುಗು ನೀಡಿದೆ. ನಾನು ಇಂದು ಕಂಬಳ ವೀಕ್ಷಣೆ ಮಾಡಿ, ಇದರ ಅಭಿಮಾನಗಳಿಗೆ, ಆಯೋಜಕರು, ಪ್ರೋತ್ಸಾಹ ನೀಡುವವರಿಗೆ ಶುಭ ಹಾರೈಸಿ ನಿಮ್ಮ ಜತೆ ಸರ್ಕಾರ ಇದೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ ಎಂದರು.
ಈ ವರ್ಷ ನಾನು ಉಪಮುಖ್ಯಮಂತ್ರಿಯಾಗಿ ಬೆಂಗಳೂರಿನ ಜವಾಬ್ದಾರಿ ವಹಿಸಿಕೊಂಡ ನಂತರ ಇದನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಈ ಪ್ರೋತ್ಸಾಹವನ್ನು ನಾವು ಸದಾ ಮುಂದುವರಿಸುತ್ತೇವೆ. ಈ ಕಂಬಳ ಕ್ರೀಡೆ ದೇಶಕ್ಕೆ ಹಿರಿಮೆಯಾಗಿದೆ. ವಿಶ್ವಮಟ್ಟದಲ್ಲಿ ಈ ಕ್ರೀಡೆ ಗುರುತಿಸಿಕೊಳ್ಳಬೇಕು ಎಂದು ನಾವು ಬಯಸುತ್ತಿದ್ದು, ಇದಕ್ಕೆ ಬೇಕಾದ ಎಲ್ಲಾ ಸಹಕಾರವನ್ನು ನೀಡಲು ನಾನು ಬದ್ಧ ಎಂದು ಡಿಸಿಎಂ ನುಡಿದರು.
ನಿಮ್ಮ ಸರ್ಕಾರ ನಿಮ್ಮ ಜತೆ ಇರಲಿದೆ. ಇದನ್ನು ಉಳಿಸಿ ಬೆಳೆಸಿ. ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಕೋರುತ್ತೇನೆ ಎಂದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ,ಇನಾಯತ್ ಅಲಿ, ಮಂಗಳೂರು ಮಹಾನಗರಪಾಲಿಕೆ ಪ್ರತಿಪಕ್ಷದ ನಾಯಕ,ತಿರುವೈಲುಗುತ್ತಿನ ಪ್ರವೀಣ್ ಚಂದ್ರ ಆಳ್ವ,ನವೀನ್ ಚಂದ್ರ ಆಳ್ವ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾಯೋಜನೆ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು