11:45 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಇದು ಆಡಳಿತವಲ್ಲ, ಸಂಘಟಿತ ಲೂಟಿ: ಸಿಲಿಂಡರ್ ದರ ಏರಿಕೆ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

02/05/2026, 20:28

ಬೆಂಗಳೂರು(reporterkarnataka.com): ದೇಶಾದ್ಯಂತ ಕಮರ್ಷಿಯಲ್ ಸಿಲಿಂಡರ್ ದರ ಏರಿಕೆ ವಿಚಾರ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ರಾಜ್ಯದ ಹೋಟೆಲ್ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇದು ಆಡಳಿತವಲ್ಲ, ಇದು ಸಂಘಟಿತ ಲೂಟಿ. ಚುನಾವಣೆಯ ಸಮಯದಲ್ಲಿ ಜನರನ್ನು ದಾರಿ ತಪ್ಪಿಸುವುದು ಮತ್ತು ನಂತರ ಅವರ ಮೇಲೆ ಹೊರೆ ಹಾಕುವುದು ಪ್ರಧಾನಿ ನರೇಂದ್ರ ಮೋದಿ ಮಾದರಿ ಎಂದು ಸಿಎಂ ವಾಗ್ದಾಳಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನಾವು ಮೊದಲೇ ಎಚ್ಚರಿಸಿದಂತೆ, ಚುನಾವಣೆಗಳು ಮುಗಿಯುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಮತ್ತೊಮ್ಮೆ ಬೆಲೆಯನ್ನು ಏರಿಕೆ ಮಾಡಿದೆ. ಚುನಾವಣೆಗಳ ಅವಧಿಯಲ್ಲಿ ದರ ಏರಿಕೆಯನ್ನು ಉದ್ದೇಶಪೂರ್ವಕವಾಗಿ ತಡೆಹಿಡಿದಿದ್ದ ಸರ್ಕಾರ, ಮೇ 1 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 993 ರೂ ರಷ್ಟು ಹೆಚ್ಚಿಸಿದೆ. ಇದರಿಂದ ಈಗ ಒಂದು ಸಿಲಿಂಡರ್ ಬೆಲೆ 3,071.50 ರೂ.ಕ್ಕೆ ತಲುಪಿದೆ ಎಂದರು. ಕೇವಲ 4 ತಿಂಗಳಲ್ಲಿ, ಮೋದಿ ಸರ್ಕಾರವು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಆರು ಬಾರಿ ಹೆಚ್ಚಿಸಿದೆ, ಇದರಿಂದ ಸಾಮಾನ್ಯ ಜನರ ಮೇಲೆ 1,518ರೂ ರಷ್ಟು ಹೆಚ್ಚುವರಿ ಹೊರೆ ಬಿದ್ದಿದೆ. ಜಾಗತಿಕವಾಗಿ ಸಮಸ್ಯೆ ಬಂದಾಗ ದೇಶದ ಜನರನ್ನ ರಕ್ಷಿಸುವ ಬದಲು, ಮೋದಿ ದೇಶದ ಜನರ ಮೇಲೆ ಹೊರೆ ಹಾಕುತ್ತಿದ್ದಾರೆ ಎಂದು ಸಿಎಂ ಹರಿಹಾಯ್ದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು