9:44 PM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ತೊಕ್ಕೊಟ್ಟು: ಜನವರಿ 13ರಂದು ಸಂಕ್ರಾಂತಿ ಕಾವ್ಯಧಾರೆ ಸಾಹಿತ್ಯ ಗೋಷ್ಠಿ ಮತ್ತು ಕೃತಿ ಲೋಕಾರ್ಪಣೆ

09/01/2024, 12:25

ಮಂಗಳೂರು(reporterkarnataka.com): ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಜನವರಿ 13ರಂದು ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿರುವ ಯುನಿಟಿ ಮಿನಿ ಹಾಲ್ ನಲ್ಲಿ ಸಂಕ್ರಾಂತಿ ಕಾವ್ಯಧಾರೆ ಸಾಹಿತ್ಯ ಗೋಷ್ಠಿ ಮತ್ತು ಕಡಲ‌ಹನಿ ಒಡಲ ಧ್ವನಿ ( ರತ್ನಾ ಭಟ್ ,ಹಾ .ಮ ಸತೀಶ, ಡಾ ಸುರೇಶ್ ನೆಗಳಗುಳಿ) ಗಜಲ್ ಸಂಕಲನದ ಲೋಕಾರ್ಪಣಾ ಸಮಾರಂಭ ಬೆಳಗ್ಗೆ ಗಂಟೆ 9ರಿಂದ ನಡೆಯಲಿದೆ.
ಈ ಸಮಾರಂಭದ ಉದ್ಘಾಟನೆ ಯನ್ನ ಕೊಟ್ರೇಶ ಉಪ್ಪಾರ ( ಕೇ.ಕ.ಸಾ.ವೇ ಸ್ಥಾಪಕಾಧ್ಯಕ್ಷರು ಬೆಂಗಳೂರು) ಇವರು ಮಾಡಲಿದ್ದಾರೆ. ವಾಸು ಸಮುದ್ರವಲ್ಲಿ ( ಕೇ.ಕ.ಸಾ.ವೇ ಮುಖ್ಯ ನಿರ್ವಾಹಕರು) ಅವರು ಆಶಯ ನುಡಿ ನುಡಿಯಲಿದ್ದಾರೆ.
ಇದೇ ವೇಳೆ ರತ್ನಾ ಭಟ್, ಹಾ.ಮ ಸತೀಶ ಮತ್ತು ಡಾ ಸುರೇಶ ನೆಗಳಗುಳಿ ಒಟ್ಟಾಗಿ ಸಂಕಲಿಸಿದ ಕಡಲ ಹನಿ ಒಡಲ ಧ್ವನಿ ಗಜಲ್ ಸಂಕಲನದ ಲೋಕಾರ್ಪಣೆಯನ್ನು ಮಹಮ್ಮದ್ ಬಡ್ಡೂರು( ಖ್ಯಾತ ಗಜಲ್ ಕವಿ, ನಟ, ಮಂಗಳೂರು) ಇವರು ಮಾಡಲಿದ್ದಾರೆ.
ಸಾಹಿತ್ಯ ಗೋಷ್ಠಿ ಅಧ್ಯಕ್ಷತೆಯನ್ನು ರತ್ನಾ ಕೆ. ಭಟ್ ತಲಂಜೇರಿ( ವಿಶ್ರಾಂತ ಮುಖ್ಯೋಪಾಧ್ಯಾಯಿನಿ, ಸಾಹಿತಿ, ಯಕ್ಷಗಾನ ಪಟು ಪುತ್ತೂರು) ವಹಿಸಲಿದ್ದಾರೆ.
ಗೋಷ್ಠಿ ಚಾಲನೆಯನ್ಮು ವೆಂಕಟ್ ಭಟ್ ಎಡನೀರು ( ಖ್ಯಾತ ವ್ಯಂಗ್ಯ ಚಿತ್ರಗಾರರು ಹಾಗೂ ನಗೆ ಚುಟುಕು ಕವಿಗಳು) ನಡೆಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಡಾ ಸುರೇಶ ನೆಗಳಗುಳಿ,( ದ.ಕ. ಜಿಲ್ಲಾ ವೇದಿಕೆ ಅಧ್ಯಕ್ಷರು ಮಂಗಳೂರು)ವಹಿಸಲಿದ್ದಾರೆ.
ಗಿರಿಜಾ ಎಂಟರ್ ಪ್ರೈಸಸ್ ನ ಲಯನ್ ಶ್ರೀನಾಥ್, ನವೀನ್ ನಾಯಕ್ ( ಉದ್ಯಮಿ ತೊಕ್ಕೊಟ್ಟು ಮಂಗಳೂರು)
ಕೊಳ್ಚಪ್ಪೆ ಗೋವಿಂದ ಭಟ್ ( ಸಾಹಿತಿ ಮಂಗಳೂರು)
ರೇಮಂಡ್ ಡಿ‌ಕುನ್ಹ ( ಪಿಂಗಾರ ಪತ್ರಿಕೆ ಮಂಗಳೂರು) ಪರಿಮಳಾ ಮಹೇಶ್ (ಉಪಾಧ್ಯಕ್ಷರು ಕೇ‌..ಕ.ಸಾ.ವೇ ದ.ಕ. ಸಮಿತಿ) ಮತ್ತು ಮನ್ಸೂರ್ ಮುಲ್ಕಿ (ಉಳ್ಳಾಲ ಎ‌ಎಸ್.ಐ) ಉಪಸ್ಥಿತರಿರುವರು. ಈ ಸಾಹಿತ್ಯ ಸಂಭ್ರಮಕ್ಕೆ ಸರ್ವ ಸಾಹಿತ್ಯಾಸಕ್ತರಿಗೆ ಸ್ವಾಗತ ಎಂದು ಅದ್ಯಕ್ಷ ಡಾ ಸುರೇಶ ನೆಗಳಗುಳಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು