4:17 PM Saturday17 - May 2025
ಬ್ರೇಕಿಂಗ್ ನ್ಯೂಸ್
ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ… Davanagere | ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದುರ್ಬಲ ಗ್ರಾಪಂಗಳ ದತ್ತು ಪಡೆದು ಸಮಗ್ರ ಅಭಿವೃದ್ಧಿಪಡಿಸಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ… ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ

ಇತ್ತೀಚಿನ ಸುದ್ದಿ

ತೊಕ್ಕೊಟ್ಟು: ಜನವರಿ 13ರಂದು ಸಂಕ್ರಾಂತಿ ಕಾವ್ಯಧಾರೆ ಸಾಹಿತ್ಯ ಗೋಷ್ಠಿ ಮತ್ತು ಕೃತಿ ಲೋಕಾರ್ಪಣೆ

09/01/2024, 12:25

ಮಂಗಳೂರು(reporterkarnataka.com): ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಜನವರಿ 13ರಂದು ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿರುವ ಯುನಿಟಿ ಮಿನಿ ಹಾಲ್ ನಲ್ಲಿ ಸಂಕ್ರಾಂತಿ ಕಾವ್ಯಧಾರೆ ಸಾಹಿತ್ಯ ಗೋಷ್ಠಿ ಮತ್ತು ಕಡಲ‌ಹನಿ ಒಡಲ ಧ್ವನಿ ( ರತ್ನಾ ಭಟ್ ,ಹಾ .ಮ ಸತೀಶ, ಡಾ ಸುರೇಶ್ ನೆಗಳಗುಳಿ) ಗಜಲ್ ಸಂಕಲನದ ಲೋಕಾರ್ಪಣಾ ಸಮಾರಂಭ ಬೆಳಗ್ಗೆ ಗಂಟೆ 9ರಿಂದ ನಡೆಯಲಿದೆ.
ಈ ಸಮಾರಂಭದ ಉದ್ಘಾಟನೆ ಯನ್ನ ಕೊಟ್ರೇಶ ಉಪ್ಪಾರ ( ಕೇ.ಕ.ಸಾ.ವೇ ಸ್ಥಾಪಕಾಧ್ಯಕ್ಷರು ಬೆಂಗಳೂರು) ಇವರು ಮಾಡಲಿದ್ದಾರೆ. ವಾಸು ಸಮುದ್ರವಲ್ಲಿ ( ಕೇ.ಕ.ಸಾ.ವೇ ಮುಖ್ಯ ನಿರ್ವಾಹಕರು) ಅವರು ಆಶಯ ನುಡಿ ನುಡಿಯಲಿದ್ದಾರೆ.
ಇದೇ ವೇಳೆ ರತ್ನಾ ಭಟ್, ಹಾ.ಮ ಸತೀಶ ಮತ್ತು ಡಾ ಸುರೇಶ ನೆಗಳಗುಳಿ ಒಟ್ಟಾಗಿ ಸಂಕಲಿಸಿದ ಕಡಲ ಹನಿ ಒಡಲ ಧ್ವನಿ ಗಜಲ್ ಸಂಕಲನದ ಲೋಕಾರ್ಪಣೆಯನ್ನು ಮಹಮ್ಮದ್ ಬಡ್ಡೂರು( ಖ್ಯಾತ ಗಜಲ್ ಕವಿ, ನಟ, ಮಂಗಳೂರು) ಇವರು ಮಾಡಲಿದ್ದಾರೆ.
ಸಾಹಿತ್ಯ ಗೋಷ್ಠಿ ಅಧ್ಯಕ್ಷತೆಯನ್ನು ರತ್ನಾ ಕೆ. ಭಟ್ ತಲಂಜೇರಿ( ವಿಶ್ರಾಂತ ಮುಖ್ಯೋಪಾಧ್ಯಾಯಿನಿ, ಸಾಹಿತಿ, ಯಕ್ಷಗಾನ ಪಟು ಪುತ್ತೂರು) ವಹಿಸಲಿದ್ದಾರೆ.
ಗೋಷ್ಠಿ ಚಾಲನೆಯನ್ಮು ವೆಂಕಟ್ ಭಟ್ ಎಡನೀರು ( ಖ್ಯಾತ ವ್ಯಂಗ್ಯ ಚಿತ್ರಗಾರರು ಹಾಗೂ ನಗೆ ಚುಟುಕು ಕವಿಗಳು) ನಡೆಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಡಾ ಸುರೇಶ ನೆಗಳಗುಳಿ,( ದ.ಕ. ಜಿಲ್ಲಾ ವೇದಿಕೆ ಅಧ್ಯಕ್ಷರು ಮಂಗಳೂರು)ವಹಿಸಲಿದ್ದಾರೆ.
ಗಿರಿಜಾ ಎಂಟರ್ ಪ್ರೈಸಸ್ ನ ಲಯನ್ ಶ್ರೀನಾಥ್, ನವೀನ್ ನಾಯಕ್ ( ಉದ್ಯಮಿ ತೊಕ್ಕೊಟ್ಟು ಮಂಗಳೂರು)
ಕೊಳ್ಚಪ್ಪೆ ಗೋವಿಂದ ಭಟ್ ( ಸಾಹಿತಿ ಮಂಗಳೂರು)
ರೇಮಂಡ್ ಡಿ‌ಕುನ್ಹ ( ಪಿಂಗಾರ ಪತ್ರಿಕೆ ಮಂಗಳೂರು) ಪರಿಮಳಾ ಮಹೇಶ್ (ಉಪಾಧ್ಯಕ್ಷರು ಕೇ‌..ಕ.ಸಾ.ವೇ ದ.ಕ. ಸಮಿತಿ) ಮತ್ತು ಮನ್ಸೂರ್ ಮುಲ್ಕಿ (ಉಳ್ಳಾಲ ಎ‌ಎಸ್.ಐ) ಉಪಸ್ಥಿತರಿರುವರು. ಈ ಸಾಹಿತ್ಯ ಸಂಭ್ರಮಕ್ಕೆ ಸರ್ವ ಸಾಹಿತ್ಯಾಸಕ್ತರಿಗೆ ಸ್ವಾಗತ ಎಂದು ಅದ್ಯಕ್ಷ ಡಾ ಸುರೇಶ ನೆಗಳಗುಳಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು