8:22 AM Thursday13 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ತೊಕ್ಕೊಟ್ಟು ಜಂಕ್ಷನ್; ದಿನದ 24 ತಾಸು 110 ಅಡಿ ಎತ್ತರದಲ್ಲಿ ಹಾರಲಿದೆ ತ್ರಿವರ್ಣ ಧ್ವಜ!: ಶಾಸಕ ಖಾದರ್ ಈ ಕುರಿತು ಹೇಳಿದ್ದೇನು?

20/07/2022, 18:10

ಮಂಗಳೂರು(reporterkarnataka.com): ಉಳ್ಳಾಲದ ಗೇಟ್ ವೇ ಎಂದೇ ಪರಿಗಣಿಸಲಾದ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ 110 ಅಡಿ ಎತ್ತರದಲ್ಲಿ ರಾಷ್ಟ್ರ ಧ್ವಜವನ್ನು 24 ಗಂಟೆಗಳ ಕಾಲ ಹಾರಾಟ ಮಾಡಲು ಧ್ವಜಸ್ತಂಭ ಸಿದ್ಧವಾಗಿದ್ದು ಉಳ್ಳಾಲವನ್ನು ಪಾಕಿಸ್ತಾನ ಅಂತ ಹೇಳಿದವರಿಗೆ ಇದು ಪರದೇಶ ಅಲ್ಲ, ನಮ್ಮ ದೇಶ ಎಂಬ ಭಾವನೆ ಬರಲಿದೆ ಎಂದು ಪ್ರತಿಪಕ್ಷದ ಉಪ ನಾಯಕ ಹಾಗೂ ಸ್ಥಳೀಯ ಶಾಸಕ ಯು.ಟಿ.ಖಾದ‌ರ್ ಪರೋಕ್ಷ ಟಾಂಗ್ ನೀಡಿದ್ದಾರೆ.

ಉಳ್ಳಾಲ ಓವರ್‌ ಬ್ರಿಡ್ಜ್ ಬಳಿ ಧ್ವಜಸ್ತಂಭ ಕಾಮಗಾರಿ ವೀಕ್ಷಿಸಿದ ಬಳಿಕ ಮಾಧ್ಯಮ ಜತೆ ಮಾತನಾಡಿದ ಖಾದರ್, ಉಳ್ಳಾಲದ ಜನತೆಯ ಗೌರವದ ಸಂಕೇತವಾಗಿ ಧ್ವಜಸ್ತಂಭ ನಿರ್ಮಾಣವಾಗಿದೆ. ಅದರ ಮೇಲೆ ತ್ರಿವರ್ಣ ಧ್ವಜ ಹಾರಾಡಲಿದೆ. ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಸಂದರ್ಭ ದಾಖಲೆ ಎತ್ತರದಲ್ಲಿ ನಿರ್ಮಾಣಗೊಂಡಿದೆ. ಕುತ್ತಾರು ದೇರಳಕಟ್ಟೆ ರಸ್ತೆಯ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಶ್ರೀನಿವಾಸ ಮಲ್ಯ ಪ್ರತಿಮೆಯ ನಿರ್ಮಾಣ ಕಾರ್ಯವೂ ನಡೆಯಲಿದೆ ಎಂದರು.


ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಒಟ್ಟು ಎರಡು ಧ್ವಜಸ್ತಂಭ ನಿರ್ಮಾಣವಾಗಲಿದ್ದು, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭ ಸ್ಥಳಾಂತರ ಮಾಡಲೂ ಅಡ್ಡಿಯಿಲ್ಲ ಎಂದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಪಾಧ್ಯಕ್ಷ ಸುರೇಶ್‌ ಭಟ್ನಗರ ಮೊದಲಾದವರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು