12:17 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ತೊಕ್ಕೊಟ್ಟು ಸಮೀಪ ಯದ್ವಾತದ್ವಾ ಚಲಿಸಿ ಡಿಕ್ಕಿ ಹೊಡೆದ ಕಾರು: 3 ಹಸುಗಳ ದಾರುಣ ಸಾವು, ಕರು ಚಿಂತಾಜನಕ; ಕಾರು ವೈದ್ಯರದ್ದೇ?

09/07/2023, 13:42

ಮಂಗಳೂರು(reporterkarnataka.com): ನಗರದ ಹೊರವಲಯದ ತೊಕ್ಕೊಟ್ಟು ಸಮೀಪದ
ಕುತ್ತಾರು ಪಂಡಿತ್ ಹೌಸ್ ಬಳಿ ಯದ್ವಾತದ್ವಾ ಚಲಿಸಿದ ಕಾರೊಂದು ಬಾಯಿ ಬಾರದ ಮೂರು ಹಸುಗಳನ್ನು ಬಲಿ ಪಡೆದು, ಕರುವೊಂದನ್ನು ಗಂಭೀರವಾಗಿ ಗಾಯಗೊಳಿಸಿ ಪಲ್ಟಿಯಾದ ಭಯಾನಕ ಘಟನೆ ಭಾನುವಾರ ಮುಂಜಾನೆ ನಡೆದಿದೆ.
ಯುವಕ ಹಾಗೂ ಯುವತಿಯರಿದ್ದ ಕ್ರೆಟಾ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮೂರು ಗೋವುಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಮುಂಜಾನೆ 3.45ರ ವೇಳೆ ಘಟನೆ ನಡೆದಿದೆ.
ದೇರಳಕಟ್ಟೆಯಿಂದ ತೊಕ್ಕೊಟ್ಟಿನ ಕಡೆ ಧಾವಿಸುತ್ತಿದ್ದ ಕ್ರೆಟಾ ಕಾರು
ಯದ್ವಾತದ್ವಾ ಚಲಿಸಿದ ಕಾರಣ ಕುತ್ತಾರು ರಾಜರಾಜೇಶ್ವರಿ ದೇವಸ್ಥಾನದ ಬಳಿ ಕರುವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕರು ಗಂಭೀರ ಗಾಯಗೊಂಡಿದೆ. ಅಲ್ಲಿಂದ ಮುಂದಕ್ಕೆ ಚಲಿಸಿದ ಕಾರು ಪಂಡಿತ್ ಹೌಸ್ ಬಸ್ ನಿಲ್ದಾಣದ ಬಳಿಯ ರಸ್ತೆಯಲ್ಲಿದ್ದ ಎರಡು ಹಸು ಮತ್ತೊಂದು ಹೋರಿಗೆ ರಭಸವಾಗಿ ಬಡಿದು ಪಲ್ಟಿಯಾಗಿ ಉರುಳಿ ಬಿದ್ದಿದೆ.


ಅಪಘಾತದ ತೀವ್ರತೆಗೆ ಮೂರು ಗೋವುಗಳ ಕರುಳು ಹೊರ ಬಂದು ಸ್ಥಳದಲ್ಲೇ ಸಾವನ್ನಪ್ಪಿವೆ. ಕಾರಿನಲ್ಲಿ ಯುವತಿಯರು ಹಾಗೂ ಯುವಕರಿದ್ದರೆಂದು ಹೇಳಲಾಗಿದ್ದು, ಅವರನ್ನು ದೇರಳಕಟ್ಟೆಯ ದಾಖಲಿಸಲಾಗಿದೆ. ಅವರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಸವಾರರಲ್ಲಿ ಓರ್ವ ವೈದ್ಯನಾಗಿದ್ದು ಬಾಕಿ ಮಾಹಿತಿ ಇನ್ನಷ್ಟೇ ಸಿಗಬೇಕಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು