9:31 AM Saturday20 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ತೊಕ್ಕೊಟ್ಟು ಸೇತುವೆಯಲ್ಲಿ ಸರಣಿ ಅಪಘಾತ: 6 ವಾಹನಗಳಿಗೆ ಹಾನಿ; ಹಲವರಿಗೆ ಸಣ್ಣಪುಟ್ಟ ಗಾಯ; 2 ತಾಸು ಸಂಚಾರ ವ್ಯತ್ಯಯ

16/10/2023, 21:29

ಮಂಗಳೂರು(reporterkarnataka.com): ನಗರದ ಹೊರವಲಯದ ತೊಕ್ಕೊಟ್ಟು ಸೇತುವೆಯಲ್ಲಿ ಸೋಮವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸುಮಾರು 2 ತಾಸು ಸಂಚಾರ ಸ್ಥಗಿತಗೊಂಡಿತು.


ಸೇತುವೆಯ ಮಧ್ಯದಲ್ಲಿ ಲಾರಿಯೊಂದು ಕೆಟ್ಟು ನಿಂತು ಅಪಘಾತದ ಸರಮಾಲೆಗೆ ಕಾರಣವಾಯಿತು. ಸರಣಿ ಅಪಘಾತದಲ್ಲಿ 6 ವಾಹನಗಳಿಗೆ ಹಾನಿಗೀಡಾಗಿವೆ.
ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಲಾರಿಯೊಂದು ಸೇತುವೆ ಮಧ್ಯಭಾಗದಲ್ಲಿ ಕೆಟ್ಟು ನಿಂತಿತ್ತು. ಇದೇ ಸಮಯದಲ್ಲಿ ಭಾರೀ ಮಳೆ ಆರಂಭವಾಗಿತ್ತು. ಇದರ ಪರಿಣಾಮ ನಿಯಂತ್ರಣ ಕಳೆದುಕೊಂಡ ಆಲ್ಟೊ ಕಾರೊಂದು ಲಾರಿ ಹಿಂಬದಿಗೆ ಢಿಕ್ಕಿ ಹೊಡೆಯಿತು. ಬಳಿಕ ಅಪಘಾತದ ಸರಮಾಲೆಯೇ ತೆರೆದುಕೊಂಡಿತು. ಒಂದರ ಹಿಂದೆ ಇನ್ನೊಂದರಂತೆ ರಿಟ್ಸ್ ಕಾರು, ಕಾಂಟೆಸ್ಸಾ ಕಾರು, ಪಿಕಪ್ ವಾಹನ ಹಾಗೂ ಖಾಸಗಿ ಬಸ್ ಡಿಕ್ಕಿ ಹೊಡೆಯಿತು. ಅಪಘಾತದಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸರಣಿ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ 2 ತಾಸು ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸುಗಮ ವಾಹನ ಸಂಚಾರಕ್ಕೆ ವಾಹನಗಳನ್ನು ತೆರವು ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು