5:13 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್ ಸ್ಪರ್ಧೆ

22/03/2026, 22:43

ದಾವಣಗೆರೆ(reporterkarnataka.com): ‘ಅಲ್ಪಸಂಖ್ಯಾತ ಸಮುದಾಯದ ನಾಯಕರಿಗೆ ಕಾಂಗ್ರೆಸ್‌ ಟಿಕೆಟ್‌ ಕೈತಪ್ಪಿರುವುದು ಬೇಸರವುಂಟು ಮಾಡಿದೆ. ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದೇನೆ’ ಎಂದು ಕಾಂಗ್ರೆಸ್‌ ಮುಖಂಡ ಸಾದಿಕ್‌ ಪೈಲ್ವಾನ್‌ ತಿಳಿಸಿದರು. ‘ಕಾಂಗ್ರೆಸ್‌ ಟಿಕೆಟ್‌ಗೆ 2013ರಿಂದ ಬೇಡಿಕೆ ಮುಂದಿಡುತ್ತಿದ್ದೇನೆ. ಕ್ಷೇತ್ರದಲ್ಲಿ ಪ್ರಬಲವಾಗಿರುವ ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದ ನಾಯಕರನ್ನು ಪ್ರಜ್ಞಾಪೂರ್ವಕವಾಗಿ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಮತದಾರರ ಒತ್ತಾಯದ ಮೇರೆಗೆ ಉಪಚುನಾವಣಾ ಕಣಕ್ಕೆ ಇಳಿಯಲು ಸಿದ್ಧನಾಗಿದ್ದೇನೆ’ ಎಂದು ಭಾನುವಾರ ಸುದ್ದಿಗಾರರಿಗೆ ಮಾಹಿತಿ ನೀಡಿದರು.
‘ರಾಷ್ಟ್ರಮಟ್ಟದ ಕುಸ್ತಿ ಪೈಲ್ವಾನ್‌ ಆಗಿದ್ದ ನನಗೆ ಅಖಾಡದಲ್ಲಿ ಆಟವಾಡುವ ಪಟ್ಟುಗಳು ಗೊತ್ತಿವೆ. ಮುಂದಿಟ್ಟ ಹೆಜ್ಜೆಯನ್ನು ಹಿಂದೆ ತೆಗೆಯುವುದಿಲ್ಲ. ಯಾವುದೇ ಒತ್ತಡಗಳಿಗೂ ಮಣಿಯುವುದಿಲ್ಲ. ಕ್ಷೇತ್ರದಲ್ಲಿ ಸಂಚರಿಸಿ ಮತದಾರರ ಮನವೊಲಿಸಿ ಗೆಲುವು ಸಾಧಿಸುವ ವಿಶ್ವಾಸವಿದೆ’ ಎಂದು ಹೇಳಿದರು.
ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದ ಸಾದಿಕ್‌ ಪೈಲ್ವಾನ್‌ ಅವರು ‘ಬಿ’ ಫಾರಂ ಇಲ್ಲದೇ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು