1:16 AM Monday15 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಹೋಟೆಲ್‌ ಪ್ರಚಾರಕ್ಕಾಗಿ ಮಾಂಸಾಹಾರ ಖಾದ್ಯದೊಂದಿಗೆ ಶ್ರೀಕೃಷ್ಣನ ಚಿತ್ರ: ಮೂವರ ಬಂಧನ

21/04/2026, 20:59

ತಿರುವನಂತಪುರಂ(reporterkarnataka.com):ಹೋಟೆಲ್‌ವೊಂದರ ಪ್ರಚಾರಕ್ಕಾಗಿ ಮಾಂಸಾಹಾರಿ ಖಾದ್ಯದ ಜೊತೆಗೆ ಶ್ರೀಕೃಷ್ಣನ ಚಿತ್ರವನ್ನೊಳಗೊಂಡ ‘ವಿಷು’ ಹಬ್ಬದ ಪೋಸ್ಟರ್ ಹಂಚಿಕೊಂಡ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಲಂಬೂರು ಮೂಲದ ಹೋಟೆಲ್‌ ಒಂದು ‘ಕುಝಿ ಮಂದಿ’ ಎನ್ನುವ ಅರೇಬಿಯನ್ ಮಾಂಸಾಹಾರಿ ಖಾದ್ಯದ ಜೊತೆಗೆ ಶ್ರೀಕೃಷ್ಣನ ಚಿತ್ರವನ್ನು ಪ್ರಕಟಿಸಿತ್ತು. ವಿಷಯ ಗೊತ್ತಾಗಿದ್ದು, ಕೂಡಲೇ ‘ಯಮಾಮ ಶವಾಯ’ ಹೋಟೆಲ್‌ನ ಮಾಲೀಕರು ಮತ್ತು ಸಾಮಾಜಿಕ ಜಾಲತಾಣ ನಿರ್ವಹಣೆ ಮಾಡುವವರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಅವರನ್ನು ಮಂಕಡ ಪೊಲೀಸ್ ಠಾಣೆಗೆ ಕರೆಸಿ, ಬಂಧಿಸಲಾಯಿತು. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತರನ್ನು ಹೋಟೆಲ್ ಮಾಲೀಕರಾದ ಮುಸ್ತಫಾ ಕುಂದುವಾಯಿಲ್ ಮತ್ತು ಶಾಹುಲ್ ಹಮೀದ್ ಹಾಗೂ ಸಾಮಾಜಿಕ ಜಾಲತಾಣ ಖಾತೆ ನಿರ್ವಹಿಸುತ್ತಿದ್ದ ಮುಹಮ್ಮದ್ ಶಾಹಿನ್ ಎಂದು ಗುರುತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು