9:20 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಹೋಟೆಲ್‌ ಪ್ರಚಾರಕ್ಕಾಗಿ ಮಾಂಸಾಹಾರ ಖಾದ್ಯದೊಂದಿಗೆ ಶ್ರೀಕೃಷ್ಣನ ಚಿತ್ರ: ಮೂವರ ಬಂಧನ

21/04/2026, 20:59

ತಿರುವನಂತಪುರಂ(reporterkarnataka.com):ಹೋಟೆಲ್‌ವೊಂದರ ಪ್ರಚಾರಕ್ಕಾಗಿ ಮಾಂಸಾಹಾರಿ ಖಾದ್ಯದ ಜೊತೆಗೆ ಶ್ರೀಕೃಷ್ಣನ ಚಿತ್ರವನ್ನೊಳಗೊಂಡ ‘ವಿಷು’ ಹಬ್ಬದ ಪೋಸ್ಟರ್ ಹಂಚಿಕೊಂಡ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಲಂಬೂರು ಮೂಲದ ಹೋಟೆಲ್‌ ಒಂದು ‘ಕುಝಿ ಮಂದಿ’ ಎನ್ನುವ ಅರೇಬಿಯನ್ ಮಾಂಸಾಹಾರಿ ಖಾದ್ಯದ ಜೊತೆಗೆ ಶ್ರೀಕೃಷ್ಣನ ಚಿತ್ರವನ್ನು ಪ್ರಕಟಿಸಿತ್ತು. ವಿಷಯ ಗೊತ್ತಾಗಿದ್ದು, ಕೂಡಲೇ ‘ಯಮಾಮ ಶವಾಯ’ ಹೋಟೆಲ್‌ನ ಮಾಲೀಕರು ಮತ್ತು ಸಾಮಾಜಿಕ ಜಾಲತಾಣ ನಿರ್ವಹಣೆ ಮಾಡುವವರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಅವರನ್ನು ಮಂಕಡ ಪೊಲೀಸ್ ಠಾಣೆಗೆ ಕರೆಸಿ, ಬಂಧಿಸಲಾಯಿತು. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತರನ್ನು ಹೋಟೆಲ್ ಮಾಲೀಕರಾದ ಮುಸ್ತಫಾ ಕುಂದುವಾಯಿಲ್ ಮತ್ತು ಶಾಹುಲ್ ಹಮೀದ್ ಹಾಗೂ ಸಾಮಾಜಿಕ ಜಾಲತಾಣ ಖಾತೆ ನಿರ್ವಹಿಸುತ್ತಿದ್ದ ಮುಹಮ್ಮದ್ ಶಾಹಿನ್ ಎಂದು ಗುರುತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು