3:48 PM Monday12 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ತುಳು ಭಾಷೆಗೆ ಸ್ಥಾನಮಾನ ಸಿಗದಿರುವುದು ಖಂಡನೀಯ: ತುಳುವರ ಪಕ್ಷದ ಅಧ್ಯಕ್ಷ ಶೈಲೇಶ್ 

21/12/2021, 18:09

ಮಂಗಳೂರು(reporterkarnataka.com): ತುಳುವರ ಶತಮಾನಗಳ ಬೇಡಿಕೆಯಾದ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರಿಸಲು ಕೇಂದ್ರ ಸರಕಾರ ನಿರಾಕರಿಸಿರುವುದನ್ನು ತುಳುವೆರೆ ಪಕ್ಷ ಖಂಡಿಸಿದೆ.

ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ತುಳುನಾಡು ಪ್ರದೇಶವಾದ ಕಾಸರಗೋಡಿನ ಸಂಸದರಾದ ರಾಜ್ ಮೋಹನ್‌ ಉನ್ನಿತಾನ್ ಅವರು ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಬೇಡಿಕೆಯ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಹಾಯಕ ಗೃಹ ಸಚಿವ ನಿತ್ಯಾನಂದರಾಯ್ ಅವರು ಮಾತನಾಡಿ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ನಿರಾರಿಸಿದ್ದು ಖಂಡನೀಯ. ವಿವಿಧತೆಯಲ್ಲಿ ಏಕತೆ ಎನ್ನುವ ಸಂವಿಧಾನದ ಆಶಯವನ್ನು ಕೇಂದ್ರ ಸರಕಾರವು ಮರೆತಂತೆ ಕಾಣುತ್ತಿದೆ. ಪ್ರಾದೇಶಿಕ ಅಸ್ಮಿತೆ ಮತ್ತು ಭಾಷಾ ಅಸ್ಮಿತೆಯನ್ನು ನಾಶಪಡಿಸುವ ಕೇಂದ್ರ ಸರಕಾರದ ಹನ್ನಾರದ ಭಾಗವೇ ತುಳು ಭಾಷೆಗೆ 8ನೇ ಪರಿಚ್ಛೇದದ ಸ್ಥಾನಮಾನ ನಿರಾಕರಣೆಯ ಹಿಂದಿನ ಕಾರಣವಾಗಿದೆ. ಪ್ರಾದೇಶಿಕ ಅಸ್ಮಿತೆ ಮತ್ತು ಭಾಷಾ ಅಸ್ಮಿತೆಯ ಉಳಿವು, ಬೆಳವಣಿಗೆಗೆ ಸಹಕಾರ,

ಆಶ್ರಯ ನೀಡುವಲ್ಲಿ ಸರಕಾರಗಳು ವಿಫಲವಾದರೆ ಅಥವಾ ನಿರಾಕರಿಸಿದರೆ ಅಸ್ಮಿತೆ ಉಳಿಸಲು ಚಳವಳಿಯು ತನ್ನದೇ ಹಾದಿಯನ್ನು ಹಿಡಿಯುತ್ತದೆ ಎನ್ನುವುದನ್ನು ಇತಿಹಾಸದಿಂದ ಕೇಂದ್ರ ಸರಕಾರವು ತಿಳಿದುಕೊಳ್ಳುವುದು ಒಳಿತು ಎಂದು ಪಕ್ಷದ ಶೈಲೇಶ್ ಆರ್. ಜೆ. ಹೇಳಿದ್ದಾರೆ. 

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಉಡುಪಿ ಪೇಜಾವರ ಮಠದ ಸ್ವಾಮೀಜಿಗಳು ಕೇಂದ್ರ ಸರಕಾರಕ್ಕೆ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆ ಮನವಿ ಸಲ್ಲಿಸಿದರು ಕೂಡ ಕೇಂದ್ರ ಸರಕಾರ ಈ ಬೇಡಿಕೆ ಈಡೇರಿಸದಿದ್ದದ್ದು ದುರಂತವೇ ಸರಿ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ತುಳು ಭಾಷೆಯು ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ
ಹಂಚಿ ಹೋಗಿದ್ದು, ತುಳುವರ ಒಕ್ಕೊಟಗಳ ಬೇಡಿಕೆಯಾದ ರಾಜ್ಯದ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಮೀನಮೇಷ ಎಣಿಸುತ್ತಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು