11:08 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ತುಳು ಭಾಷೆಗೆ ಸ್ಥಾನಮಾನ ಸಿಗದಿರುವುದು ಖಂಡನೀಯ: ತುಳುವರ ಪಕ್ಷದ ಅಧ್ಯಕ್ಷ ಶೈಲೇಶ್ 

21/12/2021, 18:09

ಮಂಗಳೂರು(reporterkarnataka.com): ತುಳುವರ ಶತಮಾನಗಳ ಬೇಡಿಕೆಯಾದ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರಿಸಲು ಕೇಂದ್ರ ಸರಕಾರ ನಿರಾಕರಿಸಿರುವುದನ್ನು ತುಳುವೆರೆ ಪಕ್ಷ ಖಂಡಿಸಿದೆ.

ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ತುಳುನಾಡು ಪ್ರದೇಶವಾದ ಕಾಸರಗೋಡಿನ ಸಂಸದರಾದ ರಾಜ್ ಮೋಹನ್‌ ಉನ್ನಿತಾನ್ ಅವರು ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಬೇಡಿಕೆಯ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಹಾಯಕ ಗೃಹ ಸಚಿವ ನಿತ್ಯಾನಂದರಾಯ್ ಅವರು ಮಾತನಾಡಿ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ನಿರಾರಿಸಿದ್ದು ಖಂಡನೀಯ. ವಿವಿಧತೆಯಲ್ಲಿ ಏಕತೆ ಎನ್ನುವ ಸಂವಿಧಾನದ ಆಶಯವನ್ನು ಕೇಂದ್ರ ಸರಕಾರವು ಮರೆತಂತೆ ಕಾಣುತ್ತಿದೆ. ಪ್ರಾದೇಶಿಕ ಅಸ್ಮಿತೆ ಮತ್ತು ಭಾಷಾ ಅಸ್ಮಿತೆಯನ್ನು ನಾಶಪಡಿಸುವ ಕೇಂದ್ರ ಸರಕಾರದ ಹನ್ನಾರದ ಭಾಗವೇ ತುಳು ಭಾಷೆಗೆ 8ನೇ ಪರಿಚ್ಛೇದದ ಸ್ಥಾನಮಾನ ನಿರಾಕರಣೆಯ ಹಿಂದಿನ ಕಾರಣವಾಗಿದೆ. ಪ್ರಾದೇಶಿಕ ಅಸ್ಮಿತೆ ಮತ್ತು ಭಾಷಾ ಅಸ್ಮಿತೆಯ ಉಳಿವು, ಬೆಳವಣಿಗೆಗೆ ಸಹಕಾರ,

ಆಶ್ರಯ ನೀಡುವಲ್ಲಿ ಸರಕಾರಗಳು ವಿಫಲವಾದರೆ ಅಥವಾ ನಿರಾಕರಿಸಿದರೆ ಅಸ್ಮಿತೆ ಉಳಿಸಲು ಚಳವಳಿಯು ತನ್ನದೇ ಹಾದಿಯನ್ನು ಹಿಡಿಯುತ್ತದೆ ಎನ್ನುವುದನ್ನು ಇತಿಹಾಸದಿಂದ ಕೇಂದ್ರ ಸರಕಾರವು ತಿಳಿದುಕೊಳ್ಳುವುದು ಒಳಿತು ಎಂದು ಪಕ್ಷದ ಶೈಲೇಶ್ ಆರ್. ಜೆ. ಹೇಳಿದ್ದಾರೆ. 

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಉಡುಪಿ ಪೇಜಾವರ ಮಠದ ಸ್ವಾಮೀಜಿಗಳು ಕೇಂದ್ರ ಸರಕಾರಕ್ಕೆ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆ ಮನವಿ ಸಲ್ಲಿಸಿದರು ಕೂಡ ಕೇಂದ್ರ ಸರಕಾರ ಈ ಬೇಡಿಕೆ ಈಡೇರಿಸದಿದ್ದದ್ದು ದುರಂತವೇ ಸರಿ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ತುಳು ಭಾಷೆಯು ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ
ಹಂಚಿ ಹೋಗಿದ್ದು, ತುಳುವರ ಒಕ್ಕೊಟಗಳ ಬೇಡಿಕೆಯಾದ ರಾಜ್ಯದ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಮೀನಮೇಷ ಎಣಿಸುತ್ತಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು