11:11 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ತುಳುನಾಡಿನ ಭೂತಾರಾಧನೆ ಮೂಢನಂಬಿಕೆ: ಬಿ.ಟಿ. ಲಲಿತಾ ನಾಯಕ್ ವಿರುದ್ಧ ಹಿಂಜಾವೇ ಉಡುಪಿ ಠಾಣೆಗೆ ದೂರು

12/11/2022, 20:59

ಉಡುಪಿ (reporterkarnataka.com) : ಕರಾವಳಿಯ ಭೂತಾರಾಧನೆ ಮೂಢನಂಬಿಕೆ ಎಂದಿರುವ ಸಾಹಿತಿ, ಚಿಂತಕಿ, ಬಿ.ಟಿ. ಲಲಿತಾ ನಾಯಕ್ ಹೇಳಿಕೆ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ನಿಯಮದಡಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಹಿಂದೂ ಜಾಗರಣ ವೇದಿಕೆ ತಾಲೂಕು ಸಂಚಾಲಕ ಉಮೇಶ್ ಅವರು ಸಾಹಿತಿ, ಚಿಂತಕಿ, ಬಿ.ಟಿ ಲಲಿತಾ ನಾಯಕ್ ಅವರ ಚರ್ಚಾಸ್ಪದ ಹೇಳಿಕೆಗಳು ತುಳುನಾಡಿನ ಕೋಟ್ಯಂತರ ಜನರ ಭಾವನೆಗೆ ಧಕ್ಕೆಯಾಗಿದೆ. ದೈವಾರಾಧಕರನ್ನು ಬಿ.ಟಿ ಲಲಿತಾ ನಾಯಕ್ ಹೀಯಾಳಿಸಿದ್ದಾರೆ. ದೈವರಾದನೆಯ ಬಗ್ಗೆ ಬಹಳ ಕೀಳಾಗಿ ಮಾತನಾಡಿ ಮನಸ್ಸಿಗೆ ಧಕ್ಕೆ ಉಂಟು ಮಾಡಿದ್ದಾರೆ.
ಭಾರತೀಯ ದಂಡಸಂಹಿತೆ 295 ಎ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಲಿಖಿತ ದೂರು ದಾಖಲು ಮಾಡಿದ್ದೇವೆ. ಲಲಿತಾ ನಾಯಕ್ ಹೇಳಿಕೆಯಿಂದ ಧಾರ್ಮಿಕ ನಂಬಿಕೆ ಮತ್ತು ಭಾವನೆಗೆ ಘಾಸಿಯಾಗಿದೆ.

ಒಂದು ವರ್ಗ, ಸಮುದಾಯದ ಅವಹೇಳನವಾದಾಗ ಜಾರಿಯಾಗುವ ಸೆಕ್ಷನ್ ಹಾಕುವಂತೆ ಮನವಿ ಮಾಡಿದ್ದು, ಮೂರು ವರ್ಷ ಶಿಕ್ಷೆ, ದಂಡ ವಿಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು