3:58 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ತುಳುನಾಡಿನ ಭೂತಾರಾಧನೆ ಮೂಢನಂಬಿಕೆ: ಬಿ.ಟಿ. ಲಲಿತಾ ನಾಯಕ್ ವಿರುದ್ಧ ಹಿಂಜಾವೇ ಉಡುಪಿ ಠಾಣೆಗೆ ದೂರು

12/11/2022, 20:59

ಉಡುಪಿ (reporterkarnataka.com) : ಕರಾವಳಿಯ ಭೂತಾರಾಧನೆ ಮೂಢನಂಬಿಕೆ ಎಂದಿರುವ ಸಾಹಿತಿ, ಚಿಂತಕಿ, ಬಿ.ಟಿ. ಲಲಿತಾ ನಾಯಕ್ ಹೇಳಿಕೆ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ನಿಯಮದಡಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಹಿಂದೂ ಜಾಗರಣ ವೇದಿಕೆ ತಾಲೂಕು ಸಂಚಾಲಕ ಉಮೇಶ್ ಅವರು ಸಾಹಿತಿ, ಚಿಂತಕಿ, ಬಿ.ಟಿ ಲಲಿತಾ ನಾಯಕ್ ಅವರ ಚರ್ಚಾಸ್ಪದ ಹೇಳಿಕೆಗಳು ತುಳುನಾಡಿನ ಕೋಟ್ಯಂತರ ಜನರ ಭಾವನೆಗೆ ಧಕ್ಕೆಯಾಗಿದೆ. ದೈವಾರಾಧಕರನ್ನು ಬಿ.ಟಿ ಲಲಿತಾ ನಾಯಕ್ ಹೀಯಾಳಿಸಿದ್ದಾರೆ. ದೈವರಾದನೆಯ ಬಗ್ಗೆ ಬಹಳ ಕೀಳಾಗಿ ಮಾತನಾಡಿ ಮನಸ್ಸಿಗೆ ಧಕ್ಕೆ ಉಂಟು ಮಾಡಿದ್ದಾರೆ.
ಭಾರತೀಯ ದಂಡಸಂಹಿತೆ 295 ಎ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಲಿಖಿತ ದೂರು ದಾಖಲು ಮಾಡಿದ್ದೇವೆ. ಲಲಿತಾ ನಾಯಕ್ ಹೇಳಿಕೆಯಿಂದ ಧಾರ್ಮಿಕ ನಂಬಿಕೆ ಮತ್ತು ಭಾವನೆಗೆ ಘಾಸಿಯಾಗಿದೆ.

ಒಂದು ವರ್ಗ, ಸಮುದಾಯದ ಅವಹೇಳನವಾದಾಗ ಜಾರಿಯಾಗುವ ಸೆಕ್ಷನ್ ಹಾಕುವಂತೆ ಮನವಿ ಮಾಡಿದ್ದು, ಮೂರು ವರ್ಷ ಶಿಕ್ಷೆ, ದಂಡ ವಿಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು