7:59 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ತುಳು ನೆಲದ ಝಳಕ್ ತೋರಿಸುವ ‘ಕೊರಮ್ಮ’: ಹಳೆ ತಲೆಮಾರಿನ ಬದುಕಿನ‌ ಕಥಾ ಹಂದರ

13/08/2023, 21:38

ಮಂಗಳೂರು(reporterkarnataka.com): ‘ಕೊರಮ್ಮ …ಎ ಹ್ಯೂಮನ್’ ಎನ್ನುವ ಟೈಟಲ್‌ನೊಂದಿಗೆ ಆರಂಭವಾಗುವ ಸಿನಿಮಾ ಇದು. ತುಳುನಾಡಿನ ಸಂಸ್ಕೃತಿ, ಭಾಷೆ, ಮಾನವೀಯ ಮೌಲ್ಯವನ್ನು ಒಂದು ಫ್ರೇಮ್ ನೊಳಗೆ ಕೊರಮ್ಮದಲ್ಲಿ ಸೆರೆ ಹಿಡಿಯುವ ಪ್ರಯತ್ನ ನಡೆದಿದೆ.
ಕೊರಮ್ಮದಲ್ಲಿ ಹಳೆ ತಲೆಮಾರಿನ ಸುಂದರ ಬದುಕನ್ನು ಅತೀ ಸುಂದರವಾಗಿ ಕಟ್ಟಿಕೊಡಲಾಗಿದೆ. ಇದರಲ್ಲಿ
ಈ ನೆಲದ ಕಥೆ ನೇತ್ರಾವತಿಯಂತೆ, ಕುಮಾರಧಾರೆಯಂತೆ,‌ ಫಲ್ಗುಣಿಯಂತೆ ಸರಾಗವಾಗಿ ಹರಿದು ಬರುತ್ತದೆ. ಮಾನವೀಯ ಮೌಲ್ಯ, ಸಂಬಂಧ, ಬಂಧುತ್ವವನ್ನು ಕಲಿಸಿಕೊಡುತ್ತದೆ. ತುಳುನಾಡಿನ ಜನರ ವಾಸ್ತವ ಜೀವನಕ್ಕೂ ಸಿನಿಮಾಕ್ಕೂ ತುಂಬಾ ನೆಂಟಸ್ತಿಕೆ ಕಂಡು ಬರುತ್ತದೆ.


ಜಾತಿ -ಧರ್ಮದ ಮೇಲಾಟದಲ್ಲಿ ಯುವಜನತೆ ಸಂಬಂಧಗಳನ್ನು ಕಡಿದು ಹೋಗಬಾರದು, ಕೊಂಡಿಯಂತೆ ಬೆಸೆದುಕೊಂಡು ಮುಂದೆ ಸಾಗಬೇಕು ಎಂಬ ಸಂದೇಶವನ್ನು ನಿರ್ದೇಶಕ ಶಿವಧ್ವಜ್ ಪ್ರೇಕ್ಷಕರಿಗೆ ನೀಡುವಲ್ಲಿ ಯಶಸ್ವಿಯಾದಂತೆ ಕಾಣುತ್ತದೆ.
ಚಿತ್ರವನ್ನು ವೀಕ್ಷಿಸುವಾಗ ನಮ್ಮದೇ ಹಳ್ಳಿಯ ನಮ್ಮ ಮನೆಯಲ್ಲಿ ಕೂತಿರುವ ಭಾವನೆಯನ್ನು ಹೆಚ್ಚಿನ ಪ್ರೇಕ್ಷಕರು ವ್ಯಕ್ತಪಡಿಸಿದ್ದಾರೆ.
ಚಿತ್ರದಲ್ಲಿ ಸಾಂಪ್ರದಾಯಿಕ ಪರಿಕರಗಳನ್ನು ಬಳಸಲಾಗಿದೆ.
ಶುದ್ಧ ತುಳು ಭಾಷೆಯ ಪ್ರಯೋಗವಾಗಿದೆ. ಜಂಜಾಟದ ಬದುಕಿನ ಧಾವಂತದಲ್ಲಿ ನಾವೇನೋ ಕಳೆದುಕೊಳ್ಳುತ್ತಿದ್ದೇವೆ, ಹಾಗಾಗಬಾರದು ಎನ್ನುವುದನ್ನು ಸಿನಿಮಾ ಸಾರಿ ಸಾರಿ ಹೇಳುತ್ತದೆ.
ಪಾತ್ರಗಳ ನೂಕು ನುಗ್ಗಲು ಇಲ್ಲದ ಕೂರಮ್ಮದಲ್ಲಿ
ಸುರೇಶ್ ಬೈರಸಂದ್ರ ಅವರ
ಅದ್ಭುತ ಛಾಯಾಗ್ರಹಣವಿದೆ. ಒಳೆಯ ಸಂಗೀತವಿದೆ.
……………..

ಇತ್ತೀಚಿನ ಸುದ್ದಿ

ಜಾಹೀರಾತು