9:31 PM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ತುಳು ನೆಲದ ಝಳಕ್ ತೋರಿಸುವ ‘ಕೊರಮ್ಮ’: ಹಳೆ ತಲೆಮಾರಿನ ಬದುಕಿನ‌ ಕಥಾ ಹಂದರ

13/08/2023, 21:38

ಮಂಗಳೂರು(reporterkarnataka.com): ‘ಕೊರಮ್ಮ …ಎ ಹ್ಯೂಮನ್’ ಎನ್ನುವ ಟೈಟಲ್‌ನೊಂದಿಗೆ ಆರಂಭವಾಗುವ ಸಿನಿಮಾ ಇದು. ತುಳುನಾಡಿನ ಸಂಸ್ಕೃತಿ, ಭಾಷೆ, ಮಾನವೀಯ ಮೌಲ್ಯವನ್ನು ಒಂದು ಫ್ರೇಮ್ ನೊಳಗೆ ಕೊರಮ್ಮದಲ್ಲಿ ಸೆರೆ ಹಿಡಿಯುವ ಪ್ರಯತ್ನ ನಡೆದಿದೆ.
ಕೊರಮ್ಮದಲ್ಲಿ ಹಳೆ ತಲೆಮಾರಿನ ಸುಂದರ ಬದುಕನ್ನು ಅತೀ ಸುಂದರವಾಗಿ ಕಟ್ಟಿಕೊಡಲಾಗಿದೆ. ಇದರಲ್ಲಿ
ಈ ನೆಲದ ಕಥೆ ನೇತ್ರಾವತಿಯಂತೆ, ಕುಮಾರಧಾರೆಯಂತೆ,‌ ಫಲ್ಗುಣಿಯಂತೆ ಸರಾಗವಾಗಿ ಹರಿದು ಬರುತ್ತದೆ. ಮಾನವೀಯ ಮೌಲ್ಯ, ಸಂಬಂಧ, ಬಂಧುತ್ವವನ್ನು ಕಲಿಸಿಕೊಡುತ್ತದೆ. ತುಳುನಾಡಿನ ಜನರ ವಾಸ್ತವ ಜೀವನಕ್ಕೂ ಸಿನಿಮಾಕ್ಕೂ ತುಂಬಾ ನೆಂಟಸ್ತಿಕೆ ಕಂಡು ಬರುತ್ತದೆ.


ಜಾತಿ -ಧರ್ಮದ ಮೇಲಾಟದಲ್ಲಿ ಯುವಜನತೆ ಸಂಬಂಧಗಳನ್ನು ಕಡಿದು ಹೋಗಬಾರದು, ಕೊಂಡಿಯಂತೆ ಬೆಸೆದುಕೊಂಡು ಮುಂದೆ ಸಾಗಬೇಕು ಎಂಬ ಸಂದೇಶವನ್ನು ನಿರ್ದೇಶಕ ಶಿವಧ್ವಜ್ ಪ್ರೇಕ್ಷಕರಿಗೆ ನೀಡುವಲ್ಲಿ ಯಶಸ್ವಿಯಾದಂತೆ ಕಾಣುತ್ತದೆ.
ಚಿತ್ರವನ್ನು ವೀಕ್ಷಿಸುವಾಗ ನಮ್ಮದೇ ಹಳ್ಳಿಯ ನಮ್ಮ ಮನೆಯಲ್ಲಿ ಕೂತಿರುವ ಭಾವನೆಯನ್ನು ಹೆಚ್ಚಿನ ಪ್ರೇಕ್ಷಕರು ವ್ಯಕ್ತಪಡಿಸಿದ್ದಾರೆ.
ಚಿತ್ರದಲ್ಲಿ ಸಾಂಪ್ರದಾಯಿಕ ಪರಿಕರಗಳನ್ನು ಬಳಸಲಾಗಿದೆ.
ಶುದ್ಧ ತುಳು ಭಾಷೆಯ ಪ್ರಯೋಗವಾಗಿದೆ. ಜಂಜಾಟದ ಬದುಕಿನ ಧಾವಂತದಲ್ಲಿ ನಾವೇನೋ ಕಳೆದುಕೊಳ್ಳುತ್ತಿದ್ದೇವೆ, ಹಾಗಾಗಬಾರದು ಎನ್ನುವುದನ್ನು ಸಿನಿಮಾ ಸಾರಿ ಸಾರಿ ಹೇಳುತ್ತದೆ.
ಪಾತ್ರಗಳ ನೂಕು ನುಗ್ಗಲು ಇಲ್ಲದ ಕೂರಮ್ಮದಲ್ಲಿ
ಸುರೇಶ್ ಬೈರಸಂದ್ರ ಅವರ
ಅದ್ಭುತ ಛಾಯಾಗ್ರಹಣವಿದೆ. ಒಳೆಯ ಸಂಗೀತವಿದೆ.
……………..

ಇತ್ತೀಚಿನ ಸುದ್ದಿ

ಜಾಹೀರಾತು